ಅಥಣಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ
Shivaji Maharaj's statue unveiled in Athani
ಕಾಗವಾಡ, 20 : ಇತ್ತಿಚಿಗೆ ಅಥಣಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿರುವ ಕಾರಣ ಯಶಸ್ವಿಗೆ ಕಾರಣೀಕರ್ತರಾದ ಮಾಜಿ ಸಚಿವರು, ಅಥಣಿ ಶುಗರ್ಸ ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಅವರನ್ನು ಇತ್ತಿಚಿಗೆ ಮೂರ್ತಿ ಪ್ರತಿಷ್ಠಾನ ಸಮಾರಂಭ ಸಮಿತಿಯ ಸದಸ್ಯರು ಸನ್ಮಾನಿಸಿ ಗೌರವಿಸಿದ್ದಾರೆ.
ಈ ವೇಳೆ ನಾನಾಸಾಬ ಅವತಾಡೆ, ಮಾತನಾಡಿ, ಅಥಣಿ ಪಟ್ಟಣದಲ್ಲಿ ಸಾಂಗಲಿಯ ಸಂಭಾಜಿ ಭಿಡೆ ಗುರುಜಿ, ಬೆಂಗಳೂರಿನ ಗೋಸಾಯಿ ಮಠದ ಶ್ರೀಗಳು ಮತ್ತು ಕೇಂದ್ರ ಮಂತ್ರಿ ಜ್ಯೋತಿರಾದಿತ್ಯ ಸಿಂಧಿಯಾ ಇವರ ಉಪಸ್ಥಿತಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮಾಜಿ ಸಚಿವರಾದ ಶ್ರೀಮಂತ ಪಾಟೀಲ ಅವರ ಪರಿಶ್ರಮ ಬಹಳಷ್ಟಿದೆ ಎಂದರು.
ಈ ವೇಳೆ ಸಮಾರಂಭ ಸಮಿತಿಯ ಸದಸ್ಯರಾದ ಭಾವುಸಾಬ ಜಾಧವ, ಸಿದ್ದು ಪಾಟೀಲ, ಶ್ರೀನಿವಾಸ ಪಾಟೀಲ, ಸಂದೀಪ ಪಾಟೀಲ, ಅಭಯ ಪಾಟೀಲ, ನಾನಾಸಾಬ ಜಾಧವ, ಅಶೋಕ ಮಾನೆ, ಧನಂಜಯ ಚವ್ಹಾನ, ಆದಿತ್ಯ ಅವತಾಡೆ, ನಾರಾಯಣ ಜಾಧವ, ನಾರಾಯಣ ಭೋಸಲೆ, ಸುನೀಲ ದೇಸಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 