ಅಥಣಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ
Shivaji Maharaj's statue unveiled in Athani
ಕಾಗವಾಡ, 20 : ಇತ್ತಿಚಿಗೆ ಅಥಣಿ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿರುವ ಕಾರಣ ಯಶಸ್ವಿಗೆ ಕಾರಣೀಕರ್ತರಾದ ಮಾಜಿ ಸಚಿವರು, ಅಥಣಿ ಶುಗರ್ಸ ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಅವರನ್ನು ಇತ್ತಿಚಿಗೆ ಮೂರ್ತಿ ಪ್ರತಿಷ್ಠಾನ ಸಮಾರಂಭ ಸಮಿತಿಯ ಸದಸ್ಯರು ಸನ್ಮಾನಿಸಿ ಗೌರವಿಸಿದ್ದಾರೆ.
ಈ ವೇಳೆ ನಾನಾಸಾಬ ಅವತಾಡೆ, ಮಾತನಾಡಿ, ಅಥಣಿ ಪಟ್ಟಣದಲ್ಲಿ ಸಾಂಗಲಿಯ ಸಂಭಾಜಿ ಭಿಡೆ ಗುರುಜಿ, ಬೆಂಗಳೂರಿನ ಗೋಸಾಯಿ ಮಠದ ಶ್ರೀಗಳು ಮತ್ತು ಕೇಂದ್ರ ಮಂತ್ರಿ ಜ್ಯೋತಿರಾದಿತ್ಯ ಸಿಂಧಿಯಾ ಇವರ ಉಪಸ್ಥಿತಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮಾಜಿ ಸಚಿವರಾದ ಶ್ರೀಮಂತ ಪಾಟೀಲ ಅವರ ಪರಿಶ್ರಮ ಬಹಳಷ್ಟಿದೆ ಎಂದರು.
ಈ ವೇಳೆ ಸಮಾರಂಭ ಸಮಿತಿಯ ಸದಸ್ಯರಾದ ಭಾವುಸಾಬ ಜಾಧವ, ಸಿದ್ದು ಪಾಟೀಲ, ಶ್ರೀನಿವಾಸ ಪಾಟೀಲ, ಸಂದೀಪ ಪಾಟೀಲ, ಅಭಯ ಪಾಟೀಲ, ನಾನಾಸಾಬ ಜಾಧವ, ಅಶೋಕ ಮಾನೆ, ಧನಂಜಯ ಚವ್ಹಾನ, ಆದಿತ್ಯ ಅವತಾಡೆ, ನಾರಾಯಣ ಜಾಧವ, ನಾರಾಯಣ ಭೋಸಲೆ, ಸುನೀಲ ದೇಸಾಯಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 