ಕೊಪ್ಪಳದಲ್ಲಿಂದು ಶಿವಸಿಂಪಿ ಸೌಹಾರ್ದ ಸಹಕಾರ ಸಂಘ ನಿಯಮಿತ ಪ್ರಾರಂಭೋತ್ಸವ
Shivasimpi Souharda Sahakari Sangha Limited inauguration ceremony in Koppal today
ಕೊಪ್ಪಳ 13: ನಗರದಲ್ಲಿ ನೂತನವಾಗಿ ಕೊಪ್ಪಳ ಶಿವಸಿಂಪಿ ಸೌಹಾರ್ದ ಸಹಕಾರ ಸಂಘ ನಿಯಮಿತ ನೂತನ ಸಹಕಾರಿಯ ಪ್ರಾರಂಭೋತ್ಸವ ಮತ್ತು ಉದ್ಘಾಟನಾ ಸಮಾರಂಭ 13ರ ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಗವಿಮಠ ರಸ್ತೆ ಅರ್ಬನ್ ಬ್ಯಾಂಕ್ ಪಕ್ಕದ ಕಟ್ಟಡದಲ್ಲಿ ಪ್ರಾರಂಭೋತ್ಸವ ಜರುಗಲಿದೆ, ಸಮಾರಂಭದ ದಿವ್ಯ ಸಾನಿಧ್ಯವನ್ನು ಮುಂಡರಗಿ ಶ್ರೀ ಅನ್ನದಾನೇಶ್ವರ ಶಾಖಾ ಮಠ ಕುಕ್ನೂರಿನ ಡಾ, ಮಹಾ ದೇವ ಮಹಾಸ್ವಾಮೀಜಿ ಗಳು ಸಾನಿಧ್ಯ ವಹಿಸಲಿದ್ದು, ನಿವೃತ್ತ ಅಭಿಯಂತ ಬಸವರಾಜ್ ಮೆರವಣಿಗೆ ,ಉದ್ಯಮಿ ಕುಷ್ಟಗಿಯ ವೀರಣ್ಣ ಚಟ್ಟೆರ್, ಸೈಬರ್ ಪೊಲೀಸ್ ಠಾಣೆಯ ಎ ಎಸ್ ಐ ವಿರೂಪಾಕ್ಷಪ್ಪ ಶಿವಸಿಂಪಿಗೆರ, ರೈಲ್ವೆ ಇಲಾಖೆಯ ನಿವೃತ್ತ ಅಭಿಯಂತ ಈರಣ್ಣ ಶಿರೂರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ಇದೇ ಸಂದರ್ಭದಲ್ಲಿ ಮಹಾ ಗಣಪತಿ ಮಹಾಲಕ್ಷ್ಮಿ ಶ್ರೀ ಮಹಾ ಸರಸ್ವತಿ ಹಾಗೂ ಶಿವ ದಾಸಿಮಯ್ಯ ರವರ ಪೂಜಾ ಸಮಾರಂಭದೊಂದಿಗೆ ನೂತನ ಸಹಕಾರಿಯ ಪ್ರಾರಂಭೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಶಿವಸಿಂಪಿ ಸೌಹಾರ್ದ ಸಹಕಾರ ಸಂಘ ನಿಯಮಿತದ ಪದಾಧಿಕಾರಿಗಳು, ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿ ವರ್ಗದವರು ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 