ಸಂಗೀತ ಸಾಧಕರಿಗೆ ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರಧಾನ
Shivayogi Puttaraj Award presented to music achievers
ಸಂಗೀತ ಸಾಧಕರಿಗೆ ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರಧಾನ
ಗದಗ 16: ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ, ಶ್ರೀ ಗುರು ಪುಟ್ಟರಾಜ ಸಂಗೀತ ಶಿಕ್ಷಣ ಸಮಿತಿ ಯಳವತ್ತಿ ಹಾಗೂ ಯಳವತ್ತಿ ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ 15ನೇ ಪುಣ್ಯಸ್ಮರಣೋತ್ಸವದ ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗದುಗಿನ ಪಂ. ವೀರೇಶ ಕಿತ್ತೂರ, ಕೊಪ್ಪಳದ ಪಂ. ಸದಾಶಿವ ಪಾಟೀಲ ಹಾಗೂ ಬೆಂಗಳೂರಿನ ಪಂ. ನಾಗಲಿಂಗಯ್ಯ ಗವಾಯಿಗಳು ಅವರಿಗೆ ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ನೀಲಗುಂದ ಗುದ್ನೇಶ್ವರ ಶ್ರೀಮಠದ ಪೂಜ್ಯಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು, ಹರ್ಲಾಪುರ ಕೊಟ್ಟೂರೇಶ್ವರ ಶ್ರೀಮಠದ ಪೂಜ್ಯಶ್ರೀ ಕೊಟ್ಟೂರೇಶ್ವರ ಶ್ರೀಗಳು, ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಕಲ್ಲಯ್ಯಜ್ಜನವರು, ಧಾರವಾಡ-ಹುಬ್ಬಳ್ಳಿ ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ,ಸಿದ್ದಲಿಂಗಯ್ಯಸ್ವಾಮಿ ಹಿರೇಮಠ, ಗ್ರಾಮ ಪಂಚಾಯತ ಅಧ್ಯಕ್ಷರಾದ ರೇಷ್ಮಾಬಾನು ಹಳೆಮನೆ, ಬಿ. ಶ್ರೀರಾಮುಲು ಅವರ ಆಪ್ತ ಸಹಾಯಕರಾದ ಎಸ್. ಎಚ್. ಶಿವನಗೌಡ್ರ, ಮುದುಕಯ್ಯಸ್ವಾಮಿ ಹಿರೇಮಠ, ಸಮಾಜಸೇವಕ ಉಮೇಶ ಹಡಪದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 