ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಆಚರಣೆ
Shivayogi Siddarameshwar Jayantyotsava celebration
ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಆಚರಣೆ
ಕಂಪ್ಲಿ 15: ಸಾಮಾಜಿಕ ಕ್ರಾಂತಿ ಹಾಗೂ ವಚನ ಸಾಹಿತ್ಯಕ್ಕೆ ಶಿವಯೋಗಿ ಸಿದ್ದರಾಮರ ಕೊಡುಗೆ ಅಪಾರ ಎಂದು ತಹಶೀಲ್ದಾರ್ ಶಿವರಾಜ ಶಿವಪುರ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ತಾಲೂಕು ಆಡಳಿ ಮತ್ತು ವಡ್ಡರ ಭೋವಿ ಸಮಾಜದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಭೋವಿ(ವಡ್ಡರ)ಸಮಾಜದ ಅಧ್ಯಕ್ಷ ಶಾಮಿನ್ ಶೇಖಪ್ಪ ಮಾತನಾಡಿ, ಶೈಕ್ಷಣಿಕ ಆರ್ಥಿಕ ಮತ್ತು ರಾಜಕೀಯ ವಾಗಿ ಹಿಂದುಳಿದ ಸಮುದಾಯವಾಗಿದೆ ಭೋವಿ ಸಮುದಾಯದಕ್ಕೆ ಸರ್ಕಾರ ಮೂಲಭೂತ ಸೌಲಭ್ಯ ಒದಗಿಸಲು ಮುಂದಾಗಬೇಕು ಬಸವಣ್ಣ, ಗಾಂಧೀಜಿ, ಅಲ್ಲಮ ಪ್ರಭು, ಬುದ್ಧ ಇನ್ನೂ ಅನೇಕ ಮಹಾನ್ ವ್ಯಕ್ತಿಗಳು ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಅಂಥವರಲ್ಲಿ ಶಿವಯೋಗಿ ಸಿದ್ದರಾಮರು ಕೂಡ ಒಬ್ಬರು. ಅವರು ಜ್ಞಾನವನ್ನು ಕೊಟ್ಟಿದ್ದಾರೆ. ಅರಿವನ್ನು ಮೂಡಿಸಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಷಣ್ಮುಕಪ್ಪ, ತಾಲೂಕು ಭೋವಿ ಸಂಘದ ಗೌರವಾಧ್ಯಕ್ಷ ವಿ.ಗೋವಿಂದರಾಜ, ಮುಖಂಡರಾದ ವಿ.ತಿಪ್ಪೇಸ್ವಾಮಿ, ವೆಂಕಟರಮಣ, ಗುರ್ರ್ಪ, ನೀಲಕಂಠ, ಗೋವಿಂದಪ್ಪ, ಟಿ.ವೆಂಕಟರಮಣ, ಬಳ್ಳಾಪುರ ಮೌನೇಶ, ಷಣ್ಮುಕ, ವೆಂಕಟೇಶ, ವಿ.ಬಿ.ನಾಗರಾಜ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಇಲ್ಲಿನ ತಾಲೂಕು ಭೋವಿ ಸಂಘದ ಸಮುದಾಯ ಭವನದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 