ಸಿದ್ದರಾಮಯ್ಯ ಕಾರು ತಪಾಸಣೆ
Siddaramaiah car inspection
ಚಿಕ್ಕಬಳ್ಳಾಪುರ,ಡಿ2-ಚಿಕ್ಕಬಳ್ಳಾಪುರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರ ಕಾರನ್ನು ಚುನಾವಣಾಧಿಕಾರಿಗಳು ತಡೆದು ತಪಾಸಣೆ ನಡೆಸಿದ ಪ್ರಸಂಗ ಜರುಗಿತು.
ಸೋಮವಾರ ಬೆಳಿಗ್ಗೆ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನಂದಿ ಚೆಕ್ ಪೋಸ್ಟ್ ನಲ್ಲಿ ಸಿದ್ದರಾಮಯ್ಯ ಅವರ ಕಾರನ್ನು ಚುನಾವಣಾಧಿಕಾರಿಗಳು ತಡೆದು ತಪಾಸಣೆಗೆ ಮುಂದಾದರು. ಆಗ ಸಿಡುಕಿದ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಕಾರು ಪರಿಶೀಲಿಸಿದೀರಾ ಎಂದು ಚುನಾವಣಾಧಿಕಾರಿಯನ್ನು ಪ್ರಶ್ನಿಸಿದರು.
ಏಯ್ ಬಾರಯ್ಯಾ ಯಾರದಾದ್ರೂ ಏನಾದ್ರೂ ಹಿಡಿದಿದ್ದೀರಾ ಎಂದು ಕೇಳಿದಾಗ ಗ್ರಾನೈಟ್ನವರಿಗೆ ಸೇರಿದ 5ಲಕ್ಷ ರೂ.ಗಳನ್ನು ಹಿಡಿದಿದ್ದೇವೆ.ಸುಧಾಕರ್ ಅವರದ್ದು ಯಾವುದು ಸಿಕ್ಕಿಲ್ಲ ಎಂದರು. ಆಗ ಸಿದ್ದರಾಮಯ್ಯ ನಡಿನಡಿಯಪ್ಪ ನಮ್ಮ ಗಾಡಿಯಲ್ಲಿ ಏನಿದೆ ಮಣ್ಣಾಗಟ್ಟಿ ಎಂದು ಹೇಳುತ್ತಾ ಮುನ್ನಡೆದರು.
ಕಳೆದ ವಾರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರ ಸ್ವಾಮಿ ಅವರ ಕಾರನ್ನು ಇದೇ ಸ್ಥಳದಲ್ಲಿ ಚುನಾವಣಾ ಅಧಿಕಾರಿಗಳು ತಡೆದು ತಪಾಸಣೆ ನಡೆಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 