ಸರ್ಕಾರಿ ಪ್ರಾಥಮಿಕ ಶಾಲೆಯ ದುರಸ್ಥಿ ಕಾಮಗಾರಿಗೆ ಸಿದ್ದು ಸವದಿ ಚಾಲನೆ
Sidhu Savadi launches renovation work for government primary school
ಮಹಾಲಿಂಗಪುರ 24: ಸರ್ಕಾರಿ ಶಾಲಾ ಮಕ್ಕಳಿಗೆ ಆಟವಾಡಲು ಯಾವುದೇ ತೊಂದರೆಯಾಗದಂತೆ ಶೌಚಾಲಯ ನಿರ್ಮಾಣ ಮಾಡಿ ಮತ್ತು ಕಾಮಗಾರಿ ಶುದ್ಧ ಮತ್ತು ಗುಣಮಟ್ಟದ್ದಾಗಿರಲಿ ಎಂದು ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಮತ್ತು ಮುಧೋಳ ಪಂ.ರಾ, ಇಂ ಉಪವಿಭಾಗದ 2022-23 ನೇ ಸಾಲೀನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಕೇಂದ್ರ ಸರ್ಕಾರದ ವಾರ್ಷಿಕ ಕ್ರೀಯಾ ಯೋಜನೆ ಅನುದಾನದಲ್ಲಿ ಅಂದಾಜು 20 ಲಕ್ಷ ರೂ ವೆಚ್ಚದಲ್ಲಿ ಶೌಚಾಲಯ ಮತ್ತು ಶಾಲೆ ವಿವಿಧ ದುರಸ್ಥಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು ಸರ್ಕಾರ ಪ್ರತಿವರ್ಷ ತರುವ ವಿವಿಧ ಯೋಜನೆಗಳು ಸಕಾಲದಲ್ಲಿ ಸಾರ್ವಜನಿಕರಿಗೆ ಮುಟ್ಟಬೇಕು, ಮತ್ತು ಯಾರು ಶಿಕ್ಷಣದಿಂದ ವಂಚಿತರಾಗಬಾರದು.
ಎನ್ನುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿವುರ್ಷ ಸಾಕಷ್ಟು ಹಣ ಖರ್ಚು ಮಾಡಿ ಸರ್ಕಾರಿ ಶಾಲೆಗಳ ಸುಧಾರಣೆ ಮಾಡುತ್ತಲೆ ಬಂದಿವೆ, ಕಾರಣ ಸರ್ಕಾರದ ಹಣ ಪೋಲಾಗಬಾರದು ಹಾಗೂ ಶಿಕ್ಷಕರು ಸಹ ಇಂಥ ಕಾಮಗಾರಿಗಳ ಗುಣಮಟ್ಟ ಸರಿಯಾಗುವಂತೆ ನೋಡಿಕೊಳ್ಳಬೇಕು. ಒಟ್ಟಿನಲ್ಲಿ ಬಡಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶೇಖರ ಅಂಗಡಿ, ಚನಬಸು ಯರಗಟ್ಟಿ, ಚನ್ನಪ್ಪ ಪಟ್ಟಣಶೆಟ್ಟಿ, ವಿರೇಶ ಮುಂಡಗನೂರ, ಶಿವಲಿಂಗ ಘಂಟಿ, ಭೀಮಶಿ ಗೌಂಡಿ, ಬಸವರಾಜ ಗಿರಿಸಾಗರ, ಸಂದೀಪ ಸುರಗೋಂಡ, ಮಾಹಾಂತೇಶ ಪಾತ್ರೋಟ, ಬಸು ಮಡ್ಡೇನ್ನವರ, ಎಸ್.ಡಿ.ಎಂ.ಸಿ ಅಧ್ಯಕ್ಷ ಉಸ್ಮಾನ ಪೆಂಡಾರ, ಬಸು ಮಡಿವಾಳ, ಗಿರೇಪ್ಪ ಕಬಾಡಿ, ಪ್ರಾಚಾರ್ಯ ಎಂ.ಎಸ್ ಬಿ ಪಾಟೀಲ, ಶಿಕ್ಷಕರಾದ ವೈ .ವೈ ತಂಬೂರಿ, ಎಂ.ಆರ್. ಚಿತ್ರಗಾರ. ಲತಾ ಪೂಜೇರಿ, ಎಸ್.ಐ ಗದಗ, ಗುರು ಪೂಜಾರಿ ಸೇರಿದಂತೆ ಹಲವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 