ಇನ್ನರ ವ್ಹೀಲ್ ಸಂಸ್ಥೆಯ ಬೆಳ್ಳಿ ಹಬ್ಬ: ಹೆಣ್ಣು ಮಕ್ಕಳ ಕವಿಗೋಷ್ಠಿ
Silver Festival of Inna's Wheel Institute: Poetry Festival for Girls
ಇನ್ನರ ವ್ಹೀಲ್ ಸಂಸ್ಥೆಯ ಬೆಳ್ಳಿ ಹಬ್ಬ: ಹೆಣ್ಣು ಮಕ್ಕಳ ಕವಿಗೋಷ್ಠಿ
ಅಥಣಿ 27: ರೋಟರಿ ಮತ್ತು ಇನ್ನರ್ ವ್ಹೀಲ್ ಸಂಸ್ಥೆಗಳು ಸಾಮಾಜಿಕ, ಸೇವಾ, ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ತನ್ನ ಕಾರ್ಯಕ್ಷೇತ್ರ ವಿಸ್ತರಿಸಿಕೊಂಡಿರುವುದು ಅಭಿನಂದನಾರ್ಹ ಸಂಗತಿ ಎಂದು ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಹೇಳಿದರು.
ಅವರು ಇನ್ನರ ವ್ಹೀಲ್ ಸಂಸ್ಥೆಯ ಬೆಳ್ಳಿ ಹಬ್ಬದ ಪ್ರಯುಕ್ತ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಖೋತ್ ಕಲ್ಯಾಣ ಮಂಟಪದಲ್ಲಿ ಹೆಣ್ಣು ಮಕ್ಕಳಿಗಾಗಿ ಆಯೋಜಿಸಿದ್ದ ಕವಿ ಗೋಷ್ಠಿಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು.
ಅಥಣಿಯಲ್ಲಿ ಕಳೆದ 25 ವರ್ಷಗಳಿಂದ ರೋಟರಿ ಮತ್ತು ಇನ್ನರ ವ್ಹೀಲ್ ಸಂಸ್ಥೆಗಳು ಜನಪರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಅಥಣಿ ಜನರ ಹೃದಯ ಗೆದ್ದುಕೊಂಡಿವೆ ಎಂದ ಅವರು ಈ ಎರಡೂ ಸಂಸ್ಥೆಗಳು ಕವಿ ಗೋಷ್ಠಿ ಆಯೋಜಿಸುವ ಮೂಲಕ ಕವಿಗಳ ಪ್ರತಿಭೆಗೆ ಸುವರ್ಣಾವಕಾಶ ಕಲ್ಪಿಸಿರುವುದು ಶ್ಲಾಘನೀಯ ಕಾರ್ಯ ಎಂದರು.
ಕವಿ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ರೋಟರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗಜಾನನ ಮಂಗಸೂಳಿ, ಕಳೆದ ವರ್ಷ ರೋಟರಿ ಕ್ಲಬ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಅಥಣಿಯಲ್ಲಿ ಆಚರಿಸಿದಂತೆ ಈ ವರ್ಷ ಇನ್ನರ ವ್ಹೀಲ್ ಸಂಸ್ಥೆ ಪ್ರಾರಂಭಗೊಂಡು 25 ವರ್ಷದ ಅಂಗವಾಗಿ 25 ವಿಶೇಷ ಕಾರ್ಯಕ್ರಮಗಳನ್ನು ರೋಟರಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು.
ರೋಟರಿ ಸಂಸ್ಥೆ ಅಧ್ಯಕ್ಷ ಅರುಣ ಸೌದಾಗರ, ಕಾರ್ಯದರ್ಶಿ ಸಚಿನ ದೇಸಾಯಿ, ಇನ್ನರ್ ವೀಲ್ ಅಧ್ಯಕ್ಷೆ ತೃಪ್ತಿ ಕುಲಕರ್ಣಿ, ಕಾರ್ಯದರ್ಶಿ ಲಲಿತಾ ಮೇಕನಮರಡಿ ಸೇರಿದಂತೆ ರೋಟರಿ ಪರಿವಾರದ ಅನೇಕರು ಉಪಸ್ಥಿತರಿದ್ದರು. 17 ಜನ ಕವಿಗಳು ತಮ್ಮ ಕವನವಾಚನ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 