ಸಿಂದಗಿ: 1000 ಎಕರೆಗೂ ಹೆಚ್ಚು ಜಮೀನು ಜಲಾವೃತ ಬೆಳೆಹಾನಿ
ಲೋಕದರ್ಶನ ವರದಿ
ಸಿಂದಗಿ 29: ಕೃಷ್ಣಾ ಭಾಗ್ಯ ಜಲ ನಿಗಮದ ಇಂಡಿ ಮುಖ್ಯ ಕಾಲುವೆ 72 ನೇ ಕಿ.ಮೀ ಕಾಲುವೆಯ ಎಡ ಭಾಗ ಒಡೆದ ಪರಿಣಾಮ ಹಿಕ್ಕಣಗುತ್ತಿ, ಕಲಹಳ್ಳಿ, ಕೋರಳ್ಳಿ ವಿಭೂತಿಹಳ್ಳಿ, ರಾಂಪೂರ ಗ್ರಾಮಗಳ ಸುಮಾರು 1000 ಎಕರೆಕ್ಕೂ ಹೆಚ್ಚು ಜಮೀನು ಜಲಾವೃತವಾಗಿ ಬೆಳೆಹಾನಿಯಾದ ಘಟನೆ ರವಿವಾರ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಬೇಟಿ ನೀಡಿದ ಮಾಜಿ ಶಾಸಕ ರಮೇಶ ಭೂಸನೂರ ಅವರು ಪರಸ್ಥಿತಿ ಪರಶೀಲನೆ ಮಾಡಿ ರೈತರೊಂದಿಗೆ ಮಾತನಮಾಡಿ, ಶೀತಲಗೊಂಡ ಕಾಳುವೆ ಒಡೆದು ಹರಿಯುವ ನೀರು ಜಮೀನುಗಳಿಗೆ ಹರಿದು ಬಂದಿದೆ. ಇದರಿಂದ ಬೆಳೆಹಾನಿಯಾಗಿದೆ. ರೈತರು ಆತಂಕ ಪಡಬಾರದು. ನಾನು ನಿಮ್ಮೊಂದಿಗಿದ್ದೇನೆ. ಹಾನಿಗೊಳಗಾದ ರೈತರು ಆತಂಕ ಪಡಬೇಕಾಗಿಲ್ಲ. ಈಗಾಗಲೇ ಕಬಿಜೆಎನ್ಎಲ್ ಎಂ.ಡಿ. ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಇಲ್ಲಿಯ ಪರಸ್ಥಿ ಬಗ್ಗೆ ಹೇಳಿದ್ದೇನೆ. ಸುಮಾರು ಸಾವಿರಾರು ಎಕರೆ ಜಮೀನಿಗೆ ಕಾಲುವೆ ನೀರು ಹರಿದು ಬಂದಿದೆ. ಇದರಿಂದ ರೈತರು ಬೆಳೆದ ತೊಗರಿ, ಹತ್ತಿ, ಕಬ್ಬು, ದ್ರಾಕ್ಷಿ ಬೆಳೆ ಹಾನಿಯಾಗಿದೆ. ಕೂಡಲೇ ಹಾನಿಯಾದ ವರದಿಯನ್ನು ಸಲ್ಲಿಸಬೇಕು ಶಿಘ್ರದಲ್ಲಿ ಪರಿಹಾರ ನೀಡುವ ಕ್ರಮ ಕೈಕೊಳ್ಳಬೇಕು ಎಂದು ಹೇಳಿದ್ದೇನೆ ಎಂದು ಹೇಳಿದರು.
ಲಗೊಂಡ ಬಗ್ಗೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಹೇಳಲಾಗಿದೆ. ಅವರು ನಿರ್ಲಕ್ಷ ಮಾಡಿದ್ದಾರೆ. ಕೂಡಲೇ ಅಧಿಕಾರಿಗಳ ಮೇಲೆ ಕ್ರಮ ಕೈಕೊಳ್ಳಬೇಕು. ಸಾಲ ಮಾಡಿ ಬೆಳೆದ ದ್ರಾಕ್ಷಿ, ಕಬ್ಬು, ಹತ್ತಿ, ತೊಗರೆ ಬೆಳೆಗಳು ಅಧಿಕಾರಿಗಳ ನಿರ್ಲಕ್ಷದಿಂದ ಕಾಲುವೆ ಒಡೆದು ಕಾಲುವೆ ನೀರು ಜಮೀನುಗಳಿಗೆ ಹರಿದು ಬಂದಿದೆ. ಇದರಿಂದ ನಮಗೆ ಸಾಕಷ್ಟು ಹಾನಿಯಾಗಿದೆ. ಶಿಘ್ರದಲ್ಲಿ ಹಾನಿಗೊಳಗಾದ ಪ್ರದೇಶವನ್ನು ಸವರ್ೆ ಮಾಡಿ ಪರಿಹಾರ ನೀಡಬೇಕು ಎಂದು ಹಾಣಿಗೊಳಗಾದ ರೈತರಾದ ರಾಜುಗೌಡ ಪಾಟೀಲ, ಸರ್ವಜ್ಞ ಹೀರೆಮಠ, ವಿವೇಕಾನಂದ ಪಾಟೀಲ, ಈರಣ್ಣ ಬಿರಾದಾರ, ಸಂಗಣ್ಣ ಮಿರಗಿ, ಮಲ್ಲಯ್ಯ ಹೀರೆಮಠ ಸೇರಿದಂತೆ ಇನ್ನುಳಿದ ರೈತರು ಆಗ್ರಹ ಪಡೆಸಿದ್ದಾರೆ.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 