ಡಿ. 6ರಿಂದ ಸಿಂದಗಿ ಪ್ರೀಮಿಯರ್ ಲೀಗ್ ಆರಂಭ
Sindh Premier League starts from December 6th
ಸಿಂದಗಿ 20: ಜಿಲ್ಲೆಯಲ್ಲಿಯೇ ಹೆಸರುವಾಸಿಯಾಗಿರುವ ಹೊನಲು ಬೆಳಕಿನ ಕ್ರಿಕೆಟ್ ಲೀಗ್ ಪಂದ್ಯಗಳು ಪ್ರತಿವರ್ಷದಂತೆ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ (ಪುಣ್ಯತಿಥಿ) ಅಂಗವಾಗಿ ಡಿ.6 ಪ್ರಾರಂಭವಾಗುವುದು ಎಂದು ಎಸ್.ಪಿ.ಎಲ್. ಮುಖ್ಯ ಸಂಯೋಜಕ ರಾಜಶೇಖರ ಕೂಚಬಾಳ ಹೇಳಿದರು.
ಡಿ.6ರಿಂದ ಪ್ರಾರಂಭವಾಗುವ ಹೊನಲು ಬೆಳಕಿನ ಕ್ರಿಕೇಟ್ ಲೀಗ್ ಪಂದ್ಯಕ್ಕೆ ಪ್ರಥಮ ಬಹುಮಾನ ರೂ.2ಲಕ್ಷ ಯುವ ಉದ್ಯಮಿ ವೆಂಕಟೇಶ್ ಆರ್ ಗುತ್ತೇದಾರ, ದ್ವಿತೀಯ ಬಹುಮಾನ ರೂ.1ಲಕ್ಷ ಬಿಜೆಪಿ ಮುಖಂಡ ರವಿ ನಾಯ್ಕೋಡಿ, ತೃತೀಯ ಬಹುಮಾನ ರೂ.50ಸಾವಿರ ರೈತ ಮುಖಂಡ ಪೀರು ಕೇರೂರ ಹಾಗೂ ನಾಲ್ಕನೆಯ ಬಹುಮಾನ ಕಾಂಗ್ರೆಸ್ ಯುವ ಮುಖಂಡ ಇರ್ಫಾನ ಬಾಗವಾನ ನೀಡಿದ್ದಾರೆ. ಅರಿವೇ ಅಂಬೇಡ್ಕರ್-ಅಮರ ಅಂಬೇಡ್ಕರ್ ಎಂಬ ಘೋಷವಾಕ್ಯದೊಂದಿಗೆ ಅಂಬೇಡ್ಕರರ ಸ್ಮರಣೆ ಟೂರ್ನಿಯುದ್ದಕ್ಕೂ ನಡೆಯಲಿದೆ ಎಂದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಂತವೀರ ಬಿರಾದಾರ ಮಾತನಾಡಿದರು. ಈ ವೇಳೆ ನೂತನ ಉಪಾಧ್ಯಕ್ಷ ಹಾಸಿಂಪೀರ ಆಳಂದ, ಎಸ್.ಪಿ.ಎಲ್. ಸಹ ಸಂಯೋಜಕ ಜಿಲಾನಿ ನಾಟೀಕಾರ, ಸಂಯೋಜಕ ಮಹ್ಮದ್ ಪಟೇಲ ಬಿರಾದಾರ, ಮಲ್ಲು ಕೂಚಬಾಳ, ಶಿವಾನಂದ ಆಲಮೇಲ, ಹುಸೇನ ತಾಂಬೋಳಿ, ಸಿದ್ದು ಮ್ಯಾಗೇರಿ, ಬಾಲಕೃಷ್ಣ ಛಲವಾದಿ, ಮುತ್ತು, ದಿನೇಶ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 