ಡಿ. 6ರಿಂದ ಸಿಂದಗಿ ಪ್ರೀಮಿಯರ್ ಲೀಗ್ ಆರಂಭ

ಡಿ. 6ರಿಂದ ಸಿಂದಗಿ ಪ್ರೀಮಿಯರ್ ಲೀಗ್ ಆರಂಭ Sindh Premier League starts from December 6th

                     ಸಿಂದಗಿ 20: ಜಿಲ್ಲೆಯಲ್ಲಿಯೇ ಹೆಸರುವಾಸಿಯಾಗಿರುವ ಹೊನಲು ಬೆಳಕಿನ ಕ್ರಿಕೆಟ್ ಲೀಗ್ ಪಂದ್ಯಗಳು ಪ್ರತಿವರ್ಷದಂತೆ ವಿಶ್ವರತ್ನ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪರಿನಿರ್ವಾಣ (ಪುಣ್ಯತಿಥಿ) ಅಂಗವಾಗಿ ಡಿ.6 ಪ್ರಾರಂಭವಾಗುವುದು ಎಂದು ಎಸ್‌.ಪಿ.ಎಲ್‌. ಮುಖ್ಯ ಸಂಯೋಜಕ ರಾಜಶೇಖರ ಕೂಚಬಾಳ ಹೇಳಿದರು. 

                   ಡಿ.6ರಿಂದ ಪ್ರಾರಂಭವಾಗುವ ಹೊನಲು ಬೆಳಕಿನ ಕ್ರಿಕೇಟ್ ಲೀಗ್ ಪಂದ್ಯಕ್ಕೆ ಪ್ರಥಮ ಬಹುಮಾನ ರೂ.2ಲಕ್ಷ ಯುವ ಉದ್ಯಮಿ ವೆಂಕಟೇಶ್ ಆರ್ ಗುತ್ತೇದಾರ, ದ್ವಿತೀಯ ಬಹುಮಾನ ರೂ.1ಲಕ್ಷ ಬಿಜೆಪಿ ಮುಖಂಡ ರವಿ ನಾಯ್ಕೋಡಿ, ತೃತೀಯ ಬಹುಮಾನ ರೂ.50ಸಾವಿರ ರೈತ ಮುಖಂಡ ಪೀರು ಕೇರೂರ ಹಾಗೂ ನಾಲ್ಕನೆಯ ಬಹುಮಾನ ಕಾಂಗ್ರೆಸ್ ಯುವ ಮುಖಂಡ ಇರ್ಫಾನ ಬಾಗವಾನ ನೀಡಿದ್ದಾರೆ. ಅರಿವೇ ಅಂಬೇಡ್ಕರ್‌-ಅಮರ ಅಂಬೇಡ್ಕರ್ ಎಂಬ ಘೋಷವಾಕ್ಯದೊಂದಿಗೆ ಅಂಬೇಡ್ಕರರ ಸ್ಮರಣೆ ಟೂರ್ನಿಯುದ್ದಕ್ಕೂ ನಡೆಯಲಿದೆ ಎಂದರು. 

                  ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಂತವೀರ ಬಿರಾದಾರ ಮಾತನಾಡಿದರು. ಈ ವೇಳೆ ನೂತನ ಉಪಾಧ್ಯಕ್ಷ ಹಾಸಿಂಪೀರ ಆಳಂದ, ಎಸ್‌.ಪಿ.ಎಲ್‌. ಸಹ ಸಂಯೋಜಕ ಜಿಲಾನಿ ನಾಟೀಕಾರ, ಸಂಯೋಜಕ ಮಹ್ಮದ್ ಪಟೇಲ ಬಿರಾದಾರ, ಮಲ್ಲು ಕೂಚಬಾಳ, ಶಿವಾನಂದ ಆಲಮೇಲ, ಹುಸೇನ ತಾಂಬೋಳಿ, ಸಿದ್ದು ಮ್ಯಾಗೇರಿ, ಬಾಲಕೃಷ್ಣ ಛಲವಾದಿ, ಮುತ್ತು, ದಿನೇಶ ಸೇರಿದಂತೆ ಅನೇಕರು ಇದ್ದರು.