ಅಂಬೇಡ್ಕರ್ ಸೇವಾಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಶಿವಕುಮಾರ್ ಆಯ್ಕೆ
ರಾಷ್ಟ್ರೀಯ ಪ್ರಶಸ್ತಿಗೆ ಶಿವಕುಮಾರ್ ಆಯ್ಕೆ
ಅಂಬೇಡ್ಕರ್ ಸೇವಾಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಶಿವಕುಮಾರ್ ಆಯ್ಕೆ
ಕಂಪ್ಲಿ 25: ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ ಭಾ.ದಲಿತ ಪ್ಯಾಂಥರ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾಜಿ ಗ್ರಾ.ಪಂ ಸದಸ್ಯ ಹಾಗೂ ವಿಎಸ್ ಕೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಕೀಲ ಶಿವಕುಮಾರ್ ಕೆ ಅವರು ನವದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ "ಡಾ.ಅಂಬೇಡ್ಕರ್ ಸೇವಾಶ್ರೀ ರಾಷ್ಟ್ರೀಯ ಪ್ರಶಸ್ತಿ"ಗೆ ಆಯ್ಕೆಗೊಂಡಿದ್ದಾರೆ.
ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಮುಖಾಂತರ ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ದಲಿತ ಹಿಂದುಳಿದವರ ಪರವಾಗಿ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದವರಿಗೆ ವೈಯಕ್ತಿಕ ಹಣದಲ್ಲಿ ಬಡ ಮಕ್ಕಳಿಗೆ ಉಚಿತವಾಗಿ ಶಾಲಾ ಸಮವಸ್ತ್ರಗಳು, ಶೂಗಳು, ಪಠ್ಯಪುಸ್ತಕಗಳನ್ನ ಉಚಿತವಾಗಿ ನೀಡುತ್ತಿರುವುದು ಹಾಗೂ ಬಡ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಾಲೆ ನಡೆಸುವುದು ಹಾಗೂ ಉಚಿತವಾಗಿ ಕೋಚಿಂಗ್ ನೀಡುವುದು ಹಾಗೂ ದಲಿತ ಸಮುದಾಯದವರ ಪರ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಲವಾರು ಸಮಾಜ ಸೇವೆಗಳನ್ನ ಶಿವ ಕುಮಾರ್ ಕೆ ರವರು ಮಾಡಿಕೊಂಡು ಬಂದಿರುವುದನ್ನು ಪರಿಗಣಿಸಿ ಸದರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಿಸೆಂಬರ್ 8, 2024 ರಂದು ನವದೆಹಲಿಯಲ್ಲಿ ನಡೆಯುವ 40ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ರಾಷ್ಟ್ರ ಅಧ್ಯಕ್ಷ ಎಸ್.ಪಿ.ಸುಮನಾಕ್ಷರ್ ಪತ್ರದ ಮೂಲಕ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 