ಸಮಾಜ ಸೇವಕ ಕಪ್ಪಗಲ್ ಸಿ. ಮುನಿಸ್ವಾಮಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
Social worker Kappagal C. Muniswamy awarded Dada Saheb Phalke Award
ಬಳ್ಳಾರಿ 13 : ನಗರ ಮತ್ತು ಗ್ರಾಮಾಂತರದಲ್ಲಿ ಸಮಾಜ ಸೇವೆ, ಕನ್ನಡ ಹೋರಾಟ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಮೂವತ್ತು ವರ್ಷದಿನಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಕಪ್ಪಗಲ್ ಸಿ. ಮುನಿಸ್ವಾಮಿ ಅವರಿಗೆ ಪ್ರಸಿದ್ಧ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ.ಇಂಟರ್ ನ್ಯಾಷನಲ್ ಹ್ಯೂಮನ್ ಡೆವಲಪ್ಮೆಂಟ್ ಕೌನ್ಸಿಲ್ ವತಿಯಿಂದ ಮುಂಬೈನಲ್ಲಿ ನವೆಂಬರ್ 30ರಂದು ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವೆ ಕ್ಷೇತ್ರದಲ್ಲಿ ಅವರ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುನಿಸ್ವಾಮಿ ಅವರು, “ಕನ್ನಡ, ನಾಡು, ನೀರು, ಜಲ ಹಾಗೂ ಭಾಷಾ ವಿಚಾರವಾಗಿ ನಮ್ಮ ಸಂಘಟನೆಯ ಮೂಲಕ ಹಲವು ಹೋರಾಟಗಳನ್ನು ನಡೆಸಿದ್ದೇನೆ.
ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾಧ್ಯವಾದ ಮಟ್ಟಿಗೆ ನೆರವಾಗುವುದರ ಜೊತೆಗೆ ಸಾಮೂಹಿಕ ವಿವಾಹಗಳನ್ನು ಆಯೋಜಿಸಿ ಸಮಾಜ ಸೇವೆಗೆ ನನ್ನನ್ನು ಸಮರ್ಿಸಿಕೊಂಡಿದ್ದೇನೆ. ನನ್ನ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಿದ ಸಂಸ್ಥೆಗೆ ಹೃತ್ಪೂರ್ವಕ ಧನ್ಯವಾದಗಳು,” ಎಂದರು.ಕಾರ್ಯಕ್ರಮದಲ್ಲಿ ಎಎಸ್ಜಿಎಸ್ ಮತ್ತು ನ್ಯಾಷನಲ್ ಅಂಡ್ ಇಂಟರ್ ನ್ಯಾಷನಲ್ ಕಲರ್ ಅಂಬಾಸಿಡರ್ ಅಧ್ಯಕ್ಷ ಡಾ. ಮಹೇಶ್ ಗೌಡ, ವಿಶ್ವನಾಥ ಜೆ. ಶೆಟ್ಟಿ ಕಲತ್ತೂರು, ಡಾ. ಬಿ.ವಿ. ಪದ್ಮಾವತಿ, ಡಾ. ಶಶಿಕಲಾ ಬಿ., ಡಾ. ಮಂಗಳಾ ಪಾಟೀಲ್, ಜಗದೀಶ್ ಎಸ್. ಪೂಜಾರಿ, ಸತೀಶ್ ಶೆಟ್ಟಿ, ಡಾ. ವಿ.ವಿ. ವಂದಿತ್, ಪ್ರವೀಣ್ ರಾವ್, ರಮೇಶ್ ಶಿವಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 