ಜಾಗೃತ ಸಮಿತಿಗೆ ಸೋಮು ಎಚ್. ಹಿಪ್ಪರಗಿ ನೇಮಕ
Somu H. Hipparagi appointed to Vigilance Committee
ವಿಜಯಪುರ 29: ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿಗೆ ವಿಜಯಪುರದ ಸೋಮು ಎಚ್. ಹಿಪ್ಪರಗಿ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸೋಮು ಹಿಪ್ಪರಗಿ ಅವರು ಅರಣ್ಯ ಅಧಿಕಾರಿಯಾಗಿದ್ದು, ಪ್ರಸ್ತುತ ಕರ್ನಾಟಕ ಸರಕಾರದಿಂದ ಉನ್ನತ ವ್ಯಾಸಂಗ ರಜೆಯ ಮೇಲೆ, ಕೇರಳ ಕೇಂದ್ರೀಯ ವಿಶ್ವ ವಿದ್ಯಾಲಯ- ಕಾಸರಗೋಡು ಕನ್ನಡ ವಿಧಾಗದ ಡಾ. ಗೋವಿಂದರಾಜು ಎಮ್.ಕಲ್ಲೂರು ಅವರ ಮಾರ್ಗದರ್ಶನದಲ್ಲಿ ’ರಾಮಾಯಣ ಮಹಾಕಾವ್ಯದಲ್ಲಿ ವನ್ಯ ಸಂಸ್ಕೃತಿ’ ಎಂಬ ವಿಷಯದ ಮೇಲೆ ಸಂಶೋಧನೆ ಕೈಗೊಂಡಿದ್ದಾರೆ. ಇಂಗ್ಲಿಷ್ ಹಾಗೂ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದದ್ದು, ಮೋಡದ ಮರೆಯಲಿ ನನ್ನೆದೆಯ ಬಾನುಲಿ ಇವರ ಮೊದಲ ಕವನ ಸಂಕಲನ. ಪರಿಸರ, ಬುಡಕಟ್ಟು ಸಂಸ್ಕೃತಿ, ಜಾನಪದ ಮತ್ತು ಹಳೆಗನ್ನಡ ಸಾಹಿತ್ಯ ಇವರ ಆಸಕ್ತಿ ವಿಷಯಗಳಾಗಿದ್ದು, ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 