ಸ್ಪೀಕರ್, 'ಕೈ' ಏಜೆಂಟ್ರಂತೆ ವರ್ತನೆ: ಶೋಭಾ ಕರಂದ್ಲಾಜೆ ಟೀಕೆ
ಶೋಭಾ ಕರಂದ್ಲಾಜೆ
ಬೆಂಗಳೂರು 15: ಗೌರವಾನ್ವಿತ ಸ್ಪೀಕರ್ ಸ್ಥಾನದಲ್ಲಿರುವ ರಮೇಶ್ ಕುಮಾರ್ ಅವರು ನೃತ್ಯಗಾರ್ತಿಯರು ಮತ್ತು ಹೆಣ್ಣು ಮಕ್ಕಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಅವರ ಮಾನಸಿಕತೆಯನ್ನು ತೋರಿಸುತ್ತದೆ.
ಅವರು ಕಾಂಗ್ರೆಸ್ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭರತನಾಟ್ಯ, ಯಕ್ಷಗಾನ ಮತ್ತು ನೃತ್ಯಗಳಿಂದ ಅನೇಕ ಮಂದಿ ದೇವರನ್ನು ಒಲಿಸಿಕೊಂಡಿದ್ದಾರೆ. ಇಂತಹ ನೃತ್ಯದ ಬಗ್ಗೆ ಸ್ಪೀಕರ್ ಅವರು ಅವಹೇಳನಕಾರಿಯಾಗಿ, ಹಗುರವಾಗಿ ಮಾತನಾಡಿದ್ದಾರೆ, ಅವರು ತಕ್ಷಣ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸಮ್ಮಿಶ್ರ ಸರಕಾರ ಬಹುಮತ ಕಳೆದುಕೊಂಡಿದೆ.
ಮುಖ್ಯಮಂತ್ರಿ ಸ್ವಯಂ ಇಚ್ಛೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಅವರಿಗೆ ಗೌರವ ಬರುತ್ತದೆ. ಶಾಸಕರೊಂದಿಗೆ ದರ್ಪ ತೋರಿದ ಕುಮಾರಸ್ವಾಮಿ ಅವರ ನಡೆಯಿಂದ ಅತೃಪ್ತ ಶಾಸಕರು, ಈಗ ಕಾಂಗ್ರೆಸ್ ನಾಯಕರ ಭೇಟಿಗೂ ಅವಕಾಶ ನೀಡುತ್ತಿಲ್ಲ. ಅವರ ಭೇಟಿಯನ್ನು ನಿರಾಕರಿಸುತ್ತಿದ್ದಾರೆ ಎಂದು ಹೇಳಿದರು.
ಮಹಾಘಟಬಂಧನ್ ಹೇಗೆ ನಡೆಯುತ್ತಿದೆ ಎಂಬುದಕ್ಕೆ ಕನರ್ಾಟಕದ ಸಮ್ಮಿಶ್ರ ಸರಕಾರವೇ ಉತ್ತಮ ನಿದರ್ಶನ. ಸಮ್ಮಿಶ್ರ ಸರಕಾರ ಸಂಪೂರ್ಣ ವೈಫಲ್ಯ ಕಂಡಿದೆ ಎಂಬುದು ಜಗಜ್ಜಾಹೀರಾಗಿದೆ ಎಂದು ಶೋಭಾ ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 