ಶೀಘ್ರ ವಿಶೇಷ ವಿಧಾನಮಂಡಲ ಅಧಿವೇಶನ
Special Legislative Session Soon
ಹುಬ್ಬಳ್ಳಿ: ಕೇಂದ್ರ ಸರ್ಕಾರ ನರೇಗಾ ಹೆಸರು ಬದಲಿಸಿದ್ದಲ್ಲದೆ, ವಿಕೇಂದ್ರೀಕರಣ ವ್ಯವಸ್ಥೆ ಹಾಳು ಮಾಡಿ ಬಡವರ ಹಕ್ಕು ಕಿತ್ತುಕೊಳ್ಳುವ ಕಾರ್ಯಕ್ಕೆ ಮುಂದಾಗಿದೆ. ಇದನ್ನು ವಿರೋಧಿಸಿ ಶೀಘ್ರವೇ ವಿಶೇಷ ವಿಧಾನಮಂಡಲ ಅಧಿವೇಶನ ಕರೆಯಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು'ಕೇಂದ್ರ ಸರ್ಕಾರ ನರೇಗಾ ಹೆಸರು ಬದಲಿಸಿ ಬಿ.ವಿ. ಜಿ ರಾಮ್ ಜಿ ಹೆಸರಲ್ಲಿ ಜಾರಿಗೆ ಮುಂದಾಗಿದೆ.ಕೇಂದ್ರ ಎನ್ ಡಿಎ ಸರ್ಕಾರ ಕೇಂದ್ರೀಕೃತ ವ್ಯವಸ್ಥೆ ಮೂಲಕ ಗ್ರಾಮೀಣದಲ್ಲಿ ಕೃಷಿ ಹಾಗೂ ಪೂರಕ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ, ವಿಕಸಿತ ಭಾರತದಡಿ ಕೆಲ ಏಜೆನ್ಸಿ ಮೂಲಕ ಕಾಮಗಾರಿ ಕೈಗೊಳ್ಳುವ. ಹುನ್ನಾರಕ್ಕೆ ಮುಂದಾಗಿದೆ. ಕಾನೂನು ಸಮರ, ಜನಹೋರಾಟ ಕೈಗೊಳ್ಳಲಾಗುವುದು; ಎಂದರು.
'ಕೇಂದ್ರದ ಈ ಯತ್ನದ ವಿರುದ್ದ ವಿಶೇಷ ವಿಧಾನಮಂಡಲ ಅಧಿವೇಶನ ಕರೆಯಲು ಜ.22ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಮಾಸಾಂತ್ಯಕ್ಕೆ ವಿಶೇಷ ಅಧಿವೇಶನ ಚಿಂತನೆ ಇದೆ' ಎಂದರು.
'ಬಿಜೆಪಿಯವರು ಪ್ರತಿ ವಿಷಯಕ್ಕೂ ವಿವಾದ ರೂಪ ನೀಡುವ ಕಾರ್ಯಮಾಡುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿನಡೆದ ವಿವಸ್ತ್ರ ಪ್ರಕರಣದಲ್ಲಿ ಪೊಲೀಸರು ಕಾನೂನು ರೀತಿ ಕ್ರಮಕೈಗೊಂಡಿದ್ದಾರೆ'
ಎಂದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 