ಶೀಘ್ರ ವಿಶೇಷ ವಿಧಾನಮಂಡಲ ಅಧಿವೇಶನ
Special Legislative Session Soon
ಹುಬ್ಬಳ್ಳಿ: ಕೇಂದ್ರ ಸರ್ಕಾರ ನರೇಗಾ ಹೆಸರು ಬದಲಿಸಿದ್ದಲ್ಲದೆ, ವಿಕೇಂದ್ರೀಕರಣ ವ್ಯವಸ್ಥೆ ಹಾಳು ಮಾಡಿ ಬಡವರ ಹಕ್ಕು ಕಿತ್ತುಕೊಳ್ಳುವ ಕಾರ್ಯಕ್ಕೆ ಮುಂದಾಗಿದೆ. ಇದನ್ನು ವಿರೋಧಿಸಿ ಶೀಘ್ರವೇ ವಿಶೇಷ ವಿಧಾನಮಂಡಲ ಅಧಿವೇಶನ ಕರೆಯಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು'ಕೇಂದ್ರ ಸರ್ಕಾರ ನರೇಗಾ ಹೆಸರು ಬದಲಿಸಿ ಬಿ.ವಿ. ಜಿ ರಾಮ್ ಜಿ ಹೆಸರಲ್ಲಿ ಜಾರಿಗೆ ಮುಂದಾಗಿದೆ.ಕೇಂದ್ರ ಎನ್ ಡಿಎ ಸರ್ಕಾರ ಕೇಂದ್ರೀಕೃತ ವ್ಯವಸ್ಥೆ ಮೂಲಕ ಗ್ರಾಮೀಣದಲ್ಲಿ ಕೃಷಿ ಹಾಗೂ ಪೂರಕ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ, ವಿಕಸಿತ ಭಾರತದಡಿ ಕೆಲ ಏಜೆನ್ಸಿ ಮೂಲಕ ಕಾಮಗಾರಿ ಕೈಗೊಳ್ಳುವ. ಹುನ್ನಾರಕ್ಕೆ ಮುಂದಾಗಿದೆ. ಕಾನೂನು ಸಮರ, ಜನಹೋರಾಟ ಕೈಗೊಳ್ಳಲಾಗುವುದು; ಎಂದರು.
'ಕೇಂದ್ರದ ಈ ಯತ್ನದ ವಿರುದ್ದ ವಿಶೇಷ ವಿಧಾನಮಂಡಲ ಅಧಿವೇಶನ ಕರೆಯಲು ಜ.22ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಮಾಸಾಂತ್ಯಕ್ಕೆ ವಿಶೇಷ ಅಧಿವೇಶನ ಚಿಂತನೆ ಇದೆ' ಎಂದರು.
'ಬಿಜೆಪಿಯವರು ಪ್ರತಿ ವಿಷಯಕ್ಕೂ ವಿವಾದ ರೂಪ ನೀಡುವ ಕಾರ್ಯಮಾಡುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿನಡೆದ ವಿವಸ್ತ್ರ ಪ್ರಕರಣದಲ್ಲಿ ಪೊಲೀಸರು ಕಾನೂನು ರೀತಿ ಕ್ರಮಕೈಗೊಂಡಿದ್ದಾರೆ'
ಎಂದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 