ಸಣಾಪುರ ಉದ್ಬವ ವೀರಭಧ್ರೇಶ್ವರನಿಗೆ ವಿಶೇಷ ಪೂಜೆ
Special Puja to Sanapura Udbava Virbhadhreshwar
ಸಣಾಪುರ ಉದ್ಬವ ವೀರಭಧ್ರೇಶ್ವರನಿಗೆ ವಿಶೇಷ ಪೂಜೆ
ಕಂಪ್ಲಿ 30: ಅವರಾತ್ರಿ (ಮೌನಿ) ಅಮವಾಸ್ಯೆ ಪ್ರಯುಕ್ತವಾಗಿ ಇಂದು ಕಂಪ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸುತ್ತಿರುವುದು ಕಂಡು ಬಂತು.ಜೊತೆಗೆ ಕಂಪ್ಲಿ ತಾಲ್ಲೂಕಿನ ಸಣಾಪುರ ಗ್ರಾಮದಲ್ಲಿ ಲಿಂಗರೂಪದಲ್ಲಿ ಉದ್ಬವಿಸಿರುವ ಶ್ರೀ ಉದ್ಬವ ವೀರಭದ್ರೇಶ್ವರನಿಗೆ ವಿಶೇಷ ಅಲಂಕಾರ ಮಾಡಿ ಪೂಜಿಸಿದರು. ಬೆಳಿಗ್ಗೆ ಲಿಂಗರೂಪಿ ಶ್ರೀ ಉದ್ಬವ ವೀರಭದ್ರೇಶ್ವರನಿಗೆ ವಿವಿಧ ಅಭಿಷೇಕಗಳನ್ನು ನೆರವೇರಿಸಿದ ನಂತರ ಚಿನ್ನಾಭರಣ ಹಾಗು ವಿವಿಧ ಹೂಗಳಿಂದ ಅಲಂಕರಿಸಿ ಮಹಾಮಂಗಳಾರತಿಯನ್ನು ಸಲ್ಲಿಸಿದರು. ನಂತರ ಪ್ರಸಾದ ವಿತರಣೆ ಜರುಗಿತು. ಅಮಾವಾಸ್ಯೆ ಪ್ರಯುಕ್ತ ಶ್ರೀ ವೀರಭದ್ರೇಶ್ವರನ ದರ್ಶನಕ್ಕೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ಆಗಮಿಸಿದ್ದರು. ಇನ್ನು ಕೆಲವರು ಪಾದಯಾತ್ರೆ ಮೂಲಕ ಆಗಮಿಸಿ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದ ಆವರಣದಲ್ಲಿ ಪ್ರತಿ ಅಮಾವಾಸ್ಯೆಯ ದಿನ ಹರಕೆ ಹೊತ್ತ ಭಕ್ತರು ಅನ್ನಸಂತರೆ್ಣ ನಡೆಸುತ್ತಾರೆ. ಜೊತೆಗೆ ಅಮಾವಾಸ್ಯೆಯ ದಿನ ರಾತ್ರಿ ದೇವಸ್ಥಾನದ ಪ್ರಾಂಗಣದಲ್ಲಿ ಕಿರು ರಥೋತ್ಸವ ಹಾಗೂ ಪ್ರಸಾದ ವಿತರಣೆ ನಡೆಯುತ್ತದೆ. ಜ.003: ಕಂಪ್ಲಿ ತಾಲ್ಲೂಕಿನ ಸಣಾಪುರ ಗ್ರಾಮದಲ್ಲಿರುವ ಶ್ರೀ ಉದ್ಮವ ವೀರಭದ್ರೇಶ್ವರನಿಗೆ ಅವರಾತ್ರಿ (ಮೌನಿ) ಅಮಾವಾಸ್ಯೆ ಪ್ರಯುಕ್ತ ವೀಶೇಷ ಅಲಂಕಾರ ಮಾಡಿ ಪೂಜಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 