ಶಿಕ್ಷಕರ ಹಾರೈಕೆಯಿಂದ ವಿಶೇಷ ಸಾಧನೆ : ಸಭಾಪತಿ ಬಸವರಾಜ ಹೊರಟ್ಟಿ
Special achievement due to teachers' wishes: Speaker Basavaraja Horatti
ಕಾರವಾರ.ಡಿ.25 : ಶಿಕ್ಷಕರ ಹಾರೈಕೆ, ಆಶೀರ್ವಾದದಿಂದ ಯಾರೂ ಮಾಡಲಾಗದ ಸಾಧನೆ ಮಾಡಲು ನನಗೆ ಸಾಧ್ಯವಾಗಿದೆ, ನಾಲ್ಕು ಬಾರಿ ಸಚಿವ, ಮೂರು ಬಾರಿ ಸಭಾಪತಿ ಆದೆ. ಇದೆಕ್ಕೆಲ್ಲಾ ಶಿಕ್ಷಕರ ಹಾರೈಕೆಯೇ ಕಾರಣ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಂತಸ ವ್ಯಕ್ತಪಡಿಸಿದರು.
ಅವರು ಶುಕ್ರವಾರ ಕಾರವಾರದ ಶಿವಾಜಿ ಹೈಸ್ಕೂಲ್ ನಲ್ಲಿ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ ಪ್ರೌಢಶಾಲಾ ಮುಖ್ಯಾಧ್ಯಪಕರ ಸಂಘ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ, ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣಾ ಸಭೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾನು ಶಿಕ್ಷಕರ ಪ್ರತಿನಿಧಿ ಆಗಿರುವುದರಿಂದ ನಾನು ಏನೆ ತಪ್ಪು ಮಾಡಿದರೂ ಶಿಕ್ಷಕರಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವ ಕಾರಣಕ್ಕೆ ಶಿಕ್ಷಕರ ಪ್ರೀತಿ ವಿಶ್ವಾಸವನ್ನು ನೆನಪಿಟ್ಟುಕೊಂಡು ತಪ್ಪು ಮಾಡದಂತೆ ಎಚ್ಚರಿಕೆ ವಹಿಸಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಅಪರ ಶಿಕ್ಷಣ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಈಶ್ವರ ನಾಯ್ಕ, ಜಿ.ಪಂ. ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಡಿಡಿಪಿಐ ಲತಾ ನಾಯಕ್, ಬಿಇಓ ಉಮೇಶ ನಾಯ್ಕ, ಉಡುಪಿಯ ಟೀಚರ್ ಕೋ-ಆಪರೇಟವ್ ಸೊಸೈಟಿ ಅಧ್ಯಕ್ಷ ದಿನಕರ ಶೆಟ್ಟಿ, ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಾಧ್ಯಾಪಕರನ್ನು ಸನ್ಮಾನಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 