ಉರಗ ರಕ್ಷಣೆಯಲ್ಲಿ ವಿಶೇಷ ಸಾಧನೆ! ಮುತ್ತುರಾಜರಿಗೆ ಸನ್ಮಾನ
Special achievement in reptile conservation! Honored to Muthuraja
ಮುಂಡಗೋಡ 17: ಯಲ್ಲಾಪುರದಲ್ಲಿ ಉಪವಲಯ ಅರಣ್ಯಾಧಿಕಾರಿಗಳ ಸಂಘದ ವತಿಯಿಂದ ಆಯೋಜಿಸಲಾದ ದಿನಚರಿ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ, ಉರಗ ರಕ್ಷಣಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮುಂಡಗೋಡ ತಾಲೂಕಿನ ಕಾತೂರ ವಲಯದ ಹಳ್ಳಿ ಗಸ್ತು ಅರಣ್ಯ ಪಾಲಕ ಮುತ್ತುರಾಜ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಹಾಗೂ ಯಲ್ಲಾಪುರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ ಭಾನು ಜಿ.ಪಿ. (ಭಾ.ಅ.ಸೇ) ಅವರು ಗೌರವ ಪ್ರದಾನ ಮಾಡಿದರು. ಜನವಸತಿಗಳಲ್ಲಿ ಸಿಲುಕುವ ವಿಷಕಾರಿ ಹಾಗೂ ಅವಿಷಕಾರಿ ಉರಗಗಳನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಗಳಿಗೆ ಬಿಡುಗಡೆ ಮಾಡುವ ಮೂಲಕ ಮುತ್ತುರಾಜ ಅವರು ಅರಣ್ಯ ಸಂರಕ್ಷಣೆ ಮತ್ತು ಮಾನವ, ವನ್ಯಜೀವ ಸಂಘರ್ಷ ತಡೆಗಟ್ಟುವಲ್ಲಿ ಮಾದರಿಯ ಸೇವೆ ಸಲ್ಲಿಸಿದ್ದಾರೆ ಎಂದು ಗಣ್ಯರು ಪ್ರಶಂಸಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 