ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು Special emphasis on development of the agricultural sector

ಲೋಕದರ್ಶನ ವರದಿ 

ತಾಂಬಾ 06 :  ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-27ನೇ ಸಾಲಿನಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದಾರೆ ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಎಂಬ ಘೋಷಣೆ ಅಡಿ ರೈತರ ಆದಾಯ ಹೆಚ್ಚಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಬಜೆಟ್ಟಿನಲ್ಲಿ ವಿಶೇಷವಾಗಿ ಕೃಷಿ ಚಟುವಟಿಕೆಗಳ ಬಲವರ್ಧನೆ ಪರಿಸರ ಸ್ನೇಹಿ ಕೃಷಿ ಪದ್ಧತಿಗಳು ರೈತರಿಗೆ ತ್ವರಿತ ಮಾಹಿತಿ ವ್ಯವಸ್ಥೆ ಮತ್ತು ಕೃಷಿ ಯಾಂತ್ರಿಕರ ಮೇಲೆ ಹೆಚ್ಚು ಗಮನ ಹರಿಸಲಾಗಿದೆ ಹೀಗೆ ಒಟ್ಟಾರೆ ಬಜೆಟ್ ರೈತರ ಪರವಾಗಿದೆ.