ಅಮ್ಮಿನಬಾವಿಯಲ್ಲಿ ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜೆ
Special puja at Amminabavi on the occasion of Hanuman Jayanti
ಅಮ್ಮಿನಬಾವಿಯಲ್ಲಿ ಹನುಮ ಜಯಂತಿ ಅಂಗವಾಗಿ ವಿಶೇಷ ಪೂಜೆ
ಧಾರವಾಡ 12 :ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿಹನುಮ ಜಯಂತಿ ಮಹೋತ್ಸವದ ಅಂಗವಾಗಿ ವೀರಾಂಜನೇಯಸ್ವಾಮಿಯ ಅಲಂಕೃತ ಭಾವಚಿತ್ರದ ಮೆರವಣಿಗೆ ಶನಿವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅತ್ಯಂತ ವಿಶಿಷ್ಟವಾಗಿ ಜರುಗಿತು.
ಉದ್ಘಾಟನೆ : ಅಮ್ಮಿನಬಾವಿ ಗ್ರಾಮ ಪಂಚಾಯತಿ ಪಕ್ಕದಲ್ಲಿರುವ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನ, ಓಂಕಾರ ಸೇವಾ ಸಂಘ ಹಾಗೂ ಮಾರುತಿ ಅಭಿವೃದ್ಧಿ ಸೇವಾ ಸಂಘ ಹಾಗೂ ಅಮ್ಮಿನಬಾವಿಯ ವಿವಿಧ ಯುವಕ ಸಂಘಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಈ ಮೆರವಣಿಯನ್ನು ಅಮ್ಮಿನಬಾವಿ ಸಂಸ್ಥಾನ ಪಂಚಗೃಹ ಹಿರೇಮಠದ ಶ್ರೀಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಶ್ರೀಹನುಮ ಜಯಂತಿ ಮಹೋತ್ಸವ ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಪುಷ್ಪವೃಷ್ಟಿಗೈದರು.ಈ ಧರ್ಮೋತ್ಸವದಲ್ಲಿ ಎಲೆಕ್ಟ್ರಾನಿಕ್ ಆನೆ, ಯಕ್ಷಗಾನ ಕಲಾವಿದರ ಕುಣಿತ ಹಾಗೂ ವಿಭಿನ್ನ ಗೊಂಬೆ ವೇಷಧಾರಿಗಳ ಪ್ರದರ್ಶನ ಗಮನಸೆಳೆದವು. ಧಾರವಾಡದ ವಿನಾಯಕ ಬೆಂಜೋ ವಾದ್ಯಮೇಳ, ಕರಡಿಮಜಲು, ಡೊಳ್ಳು, ಮಹಿಳೆಯರ ಪೂರ್ಣಕುಂಭ ಹಾಗೂ ಕೇಸರಿ ಧ್ವಜಗಳು ಮೆರವಣಿಗೆಯ ಕಳೆಯನ್ನು ಹೆಚ್ಚಿಸಿದ್ದವು. ಮೆರವಣಿಗೆಯ ನಂತರ ಸಾಮೂಹಿಕ ಅನ್ನಸಂತರೆ್ಣ ನಡೆಯಿತು.
ತೊಟ್ಟಿಲೋತ್ಸವ : ಇದಕ್ಕೂ ಮುನ್ನ ಪ್ರಾತಃಕಾಲವೀರಾಂಜನೇಯಸ್ವಾಮಿ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ನಂತರ ವೀರಾಂಜನೇಯನ ತೊಟ್ಟಿಲೋತ್ಸವ ಜರುಗಿತು. ಅಧಿಕ ಸಂಖ್ಯೆಯ ಭಕ್ತರು ಬಾಲ ಹನುಮನ ದರ್ಶನಾಶೀರ್ವಾದ ಪಡೆದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 