ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶೇಷ ಕಾರ್ಯಗಾರ
Special workshop from Dharmasthala Rural Development Project
ಯರಗಟ್ಟಿ 25: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಸಕ್ತ ಸಾಲಿನಲ್ಲಿ ಅನ್ನದಾತರ ಜ್ಞಾನವರ್ಧನೆ ಮತ್ತು ಆರ್ಥಿಕ ಬಲವರ್ಧನೆಗಾಗಿ ಕೃಷಿ ಮತ್ತು ನೀರಾವರಿ ಕುರಿತು ವಿಶೇಷ ಕಾರ್ಯಗಾರವನ್ನು ಸಮೀಪದ ಮಬನೂರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಾ ಯೋಜನೆ ಅಧಿಕಾರಿ ಶ್ರೀಕಾಂತ. ಕೆ. ಚಾಲನೆ ನೀಡಿದರು.
ಕೃಷಿ ನೀರಾವರಿ ಕುರಿತು ಮಾತನಾಡಿದ ಪ್ರಗತಿಪರ ರೈತ ಈರನಗೌಡ ಪಾಟೀಲ ಅವರು ಭಾರತವು ಕೃಷಿ ಪ್ರಧಾನ ದೇಶವಾಗಿದೆ. ಬಹುತೇಕ ರೈತರು ಕೃಷಿ ಚಟುವಟಿಕೆಗಳಿಗೆ ಕೃತಕ ನೀರಿನ ಮೂಲಗಳನ್ನು ಬಳಸುತ್ತಾರೆ. ಪ್ರತಿ ಹನಿಗೂ ಹೆಚ್ಚಿನ ಬೆಳೆ’ ಎಂಬ ಪರಿಕಲ್ಪನೆಯ ಭಾಗವಾಗಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿ ಮಾಡಲಾಗಿದೆ.ಕೃಷಿ ಭೂಮಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿಯನ್ನು ಮಾಡಲು ಸಹಾಯಧವನ್ನು ಈ ಯೋಜನೆಯ ಮೂಲಕ ನೀಡಲಾಗುತ್ತದೆ.
ಈ ವೇಳೆ ಕೃಷಿ ಅಧಿಕಾರಿ ನಾಗಪ್ಪ ನಾಯ್ಕ, ಸೇವಾ ಪ್ರತಿನಿಧಿ ಮಂಜುಳಾ ಬೀರದೇವರ, ನಾಗರಾಜ ನಾಯ್ಕ, ರೈತರಾದ ಕಿರಣಗೌಡ ಪಾಟೀಲ, ರೈತ ಮಹಿಳೆಯರಾದ ಸತ್ಯವ್ವ ಪಾಟೀಲ, ಸವಿತಾ ಪಾಟೀಲ, ಮಿನಾಕ್ಷಿ ಪಟಾತ, ರೇಣುಕಾ ಪಟಾತ, ಮಾಯವ್ವ ಪಟಾತ, ಶ್ರೀದೇವಿ ಭಾಗೋಜಿ, ಶೋಭಾ ಭಾಗೋಜಿ, ಲಕ್ಷ್ಮೀ ಈಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 