ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶೇಷ ಕಾರ್ಯಗಾರ
Special workshop from Dharmasthala Rural Development Project
ಯರಗಟ್ಟಿ 25: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಸಕ್ತ ಸಾಲಿನಲ್ಲಿ ಅನ್ನದಾತರ ಜ್ಞಾನವರ್ಧನೆ ಮತ್ತು ಆರ್ಥಿಕ ಬಲವರ್ಧನೆಗಾಗಿ ಕೃಷಿ ಮತ್ತು ನೀರಾವರಿ ಕುರಿತು ವಿಶೇಷ ಕಾರ್ಯಗಾರವನ್ನು ಸಮೀಪದ ಮಬನೂರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಾ ಯೋಜನೆ ಅಧಿಕಾರಿ ಶ್ರೀಕಾಂತ. ಕೆ. ಚಾಲನೆ ನೀಡಿದರು.
ಕೃಷಿ ನೀರಾವರಿ ಕುರಿತು ಮಾತನಾಡಿದ ಪ್ರಗತಿಪರ ರೈತ ಈರನಗೌಡ ಪಾಟೀಲ ಅವರು ಭಾರತವು ಕೃಷಿ ಪ್ರಧಾನ ದೇಶವಾಗಿದೆ. ಬಹುತೇಕ ರೈತರು ಕೃಷಿ ಚಟುವಟಿಕೆಗಳಿಗೆ ಕೃತಕ ನೀರಿನ ಮೂಲಗಳನ್ನು ಬಳಸುತ್ತಾರೆ. ಪ್ರತಿ ಹನಿಗೂ ಹೆಚ್ಚಿನ ಬೆಳೆ’ ಎಂಬ ಪರಿಕಲ್ಪನೆಯ ಭಾಗವಾಗಿ ಕೃಷಿ ಸಿಂಚಾಯಿ ಯೋಜನೆಯನ್ನು ಜಾರಿ ಮಾಡಲಾಗಿದೆ.ಕೃಷಿ ಭೂಮಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿಯನ್ನು ಮಾಡಲು ಸಹಾಯಧವನ್ನು ಈ ಯೋಜನೆಯ ಮೂಲಕ ನೀಡಲಾಗುತ್ತದೆ.
ಈ ವೇಳೆ ಕೃಷಿ ಅಧಿಕಾರಿ ನಾಗಪ್ಪ ನಾಯ್ಕ, ಸೇವಾ ಪ್ರತಿನಿಧಿ ಮಂಜುಳಾ ಬೀರದೇವರ, ನಾಗರಾಜ ನಾಯ್ಕ, ರೈತರಾದ ಕಿರಣಗೌಡ ಪಾಟೀಲ, ರೈತ ಮಹಿಳೆಯರಾದ ಸತ್ಯವ್ವ ಪಾಟೀಲ, ಸವಿತಾ ಪಾಟೀಲ, ಮಿನಾಕ್ಷಿ ಪಟಾತ, ರೇಣುಕಾ ಪಟಾತ, ಮಾಯವ್ವ ಪಟಾತ, ಶ್ರೀದೇವಿ ಭಾಗೋಜಿ, ಶೋಭಾ ಭಾಗೋಜಿ, ಲಕ್ಷ್ಮೀ ಈಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 