ಶ್ರೀ ಸಿದ್ದೇಶ್ವರ ಜಾತ್ರೆಯು ಏಪ್ರಿಲ್ 11 ರಿಂದ ಏಪ್ರಿಲ್ 13 ರವರೆಗೆ
Sri Siddeshwara Fair is from April 11 to April 13
ಲೋಕದರ್ಶನ ವರದಿ
ಕಮತೇನಟ್ಟಿ 09: ಚಿಕ್ಕೋಡಿ ತಾಲೂಕಿನ ಕಮತೇನಟ್ಟಿ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರೆಯು ಏಪ್ರಿಲ್ 11 ರಿಂದ ಪ್ರಾರಂಭವಾಗಿ ಏಪ್ರಿಲ್ 13 ರವರೆಗೆ ಜರುಗಲಿದೆ. ಏಪ್ರಿಲ್ 11 ರಂದು ಹಂದರ ಹಾಗೂ ರಾತ್ರಿ 9.30 ಘಂಟೆಗೆ ವಾಲಗ ಕೂಡುವುದು. ಏ.12ರಂದು ಮುಂಜಾನೆ ಪಲ್ಲಕ್ಕಿ ಉತ್ಸವ ಹಾಗೂ ಮಧ್ಯಾಹ್ನ ಮಹಾಪ್ರಸಾದ ಮತ್ತು ರಾತ್ರಿ 09.00 ಗಂಟೆಗೆ ರಾಧಾಕೃಷ್ಣ ಬೈಲಾಟ ಮತ್ತು ರಾತ್ರಿ 10.00 ಗಂಟೆಗೆ ರಸಮಂಜರಿ ಕಾರ್ಯಕ್ರಮ ಜರುಗುವುದು. ಏ.13ರಂದು ಸಾಯಂಕಾಲ 4 ಗಂಟೆಗೆ ಜಂಗೀ ನಿಕಾಲಿ ಕುಸ್ತಿಗಳು ನಡೆಯಲಿವೆ ಹಾಗೂ ರಾತ್ರಿ 10ಗಂಟೆಗೆ ಶ್ರೀ ಸಿದ್ದೇಶ್ವರ ನವತರುಣ ನಾಟ್ಯ ಸಂಘ ಕಲಾವಿದರ ಬಳಗ ಕಮತೇನಟ್ಟಿ ಇವರಿಂದ ಭವ್ಯರಂಗ ಮಂಟಪದಲ್ಲಿ ಶ್ರೀಮಂತನ ದರ್ಪಕಕೆ ಸಿಡಿದೆದ್ದ ಶಿವಶಕ್ತಿ ಎಂಬ ಸಾಮಾಜಿಕ ನಾಟಕ ಜರುಗಲಿದೆ ಎಂದು ದೇವಸ್ಥಾನದ ಟ್ರಸ್ಟ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 