ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಅಡ್ಡಪಲ್ಲಕ್ಕಿ ಮಹೋತ್ಸವ
Srimad Rambhapuri Veera Simhasanadishwara Addapallakki Mahotsav
ಶಿಗ್ಗಾವಿ 31 : ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದಲ್ಲಿ ಶ್ರೀ ಬಸವಣ್ಣ ದೇವರ ಜಾತ್ರಾ ಮಹೋತ್ಸವದ ಅಂಗವಾಗಿಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಂಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಗ್ರಾಮದ ಸಾವಿರಾರು ಭಕ್ತಸಮೂಹದ ನಡುವೆ ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಪ್ರಾತಃಕಾಲ 6 ಗಂಟೆಗೆ ಶ್ರೀ ಬಸವಣ್ಣ ದೇವರ ಮೂರ್ತಿಗೆ ಮಹಾ ರುದ್ರಾಭಿಷೇಕ ನಂತರ ಕಳಸ ಪೂಜೆ ಬೆಳಿಗ್ಗೆ 9 ಘಂಟೆಗೆ ರಥಕ್ಕೆ ಕಳಸಾರೋಹಣ ಮಧ್ಯಾಹ್ನ 2 ಗಂಟೆಗೆ ವಿಜೃಂಭಣೆಯಿಂದ ಅಡ್ಡಪಲ್ಲಕ್ಕಿ ಮಹೋತ್ಸವ ಜರಗಿತು, ಕುಂಭ ಹೊತ್ತ ಮಹಿಳೆಯರು ಅಡ್ಡ ಪಲ್ಲಕ್ಕಿ ಮಹೋತ್ಸವಕ್ಕೆ ಮೆರಗು ತಂದರು.ಈ ಸಂದರ್ಭದಲ್ಲಿ ವಿವಿಧ ಮಠಾಧೀಶರಾದ ಮುಕ್ತಿಮಂದಿರದ ಶ್ರಿ?ವಿಮಲರೇಣುಕ ವಿ?ರಮುಕ್ತಿಮುನಿ ಶಿವಾಚಾರ್ಯರು, ಬಂಕಾಪೂರ ಅರಳೆಲೆಮಠದ ರೇವಣಸಿದ್ದೇಶ್ವರ ಶಿವಾಚಾರ್ಯರು, ಗಂಜೀಗಟ್ಟಿ ಚರ್ಮತೇಶ್ವರ ಮಠದ ವೈಜಿನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಣಕಟ್ಟಿಯ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಗ್ರಾಮದ ಮುಖಂಡರು ಯುವಕರು ಮಹಿಳೆಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 