ಭಾರತದ ಆರ್ಥಿಕ ವ್ಯವಸ್ಥೆ ಕುರಿತು ರಾಜ್ಯ ಮಟ್ಟದ ಲಿಖಿತ ರಸಪ್ರಶ್ನೆ ಸ್ಪರ್ಧೆ

ಭಾರತದ ಆರ್ಥಿಕ ವ್ಯವಸ್ಥೆ ಕುರಿತು ರಾಜ್ಯ ಮಟ್ಟದ ಲಿಖಿತ ರಸಪ್ರಶ್ನೆ ಸ್ಪರ್ಧೆ State Level Written Quiz Competition on Indian Economic System

 ಗದಗ 03: ನಗರದ ಪ್ರತಿಷ್ಠಿತ ಕೆ.ಎಲ್‌.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿಭಾಗವು “ನೀತಿ ವೇದಿಕೆ” ಯಡಿಯಲ್ಲಿ ಪಿ.ಯು ಹಾಗೂ ಪದವಿ ವಿದ್ಯಾರ್ಥಿಗಳಿಗೆ ದಿ. 27 ರ ನವ್ಹಂಬರ 2025 ರಂದು ಭಾರತದ ಆರ್ಥಿಕ ವ್ಯವಸ್ಥೆ ಕುರಿತು ರಾಜ್ಯ ಮಟ್ಟದ ಲಿಖಿತ ರಸಪ್ರಶ್ನೆ ಸ್ಪರ್ಧೆಯನ್ನು ಏರಿ​‍್ಡಸಲಾಗಿತ್ತು.  ಗದಗ ಸುತ್ತಮುತ್ತಲಿನ ಜಿಲ್ಲೆಗಳ ವಿವಿಧ ಮಹಾವಿದ್ಯಾಲಯಗಳಿಂದ ವಿದ್ಯಾರ್ಥಿಗಳು ರಸಪ್ರಶ್ನೆಯಲ್ಲಿ ಭಾಗವಹಿಸಿದ್ದರು ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕುಮಾರ ಆದಿತ್ಯ ಗೊರವರ ಕೆ.ಎಲ್‌.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಗದಗ, ದ್ವಿತೀಯ ಸ್ಥಾನವನ್ನು ಕುಮಾರ ಮನೋಜ ಪಾಟೀಲ ಕರ್ನಾಟಕ ರಾಜ್ಯ ಕಾನೂನೂ ವಿಶ್ವವಿದ್ಯಾಲಯ ಹುಬ್ಬಳ್ಳಿ ಹಾಗೂ ತೃತೀಯ ಸ್ಥಾನವನ್ನು ಶ್ರೇಯಾ ಶೆಟ್ಟಿ ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯ  ಗದಗ ಹಾಗೂ ಕುಮಾರಿ ಪ್ರೇಮಾ ಮಲಗೋಡ ಜ.ಫ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿರಹಟ್ಟಿ  ಇವರು ಪಡದುಕೊಂಡಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎ.ಕೆ.ಮಠ ಅವರು ತಿಳಿಸಿದ್ದಾರೆ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿಜೇತ ವಿದ್ಯಾರ್ಥಿಗಳಿಗೆ ನೀಡಿ ಗೌರವಿಸಲಾಯಿತು.  ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ, ವಿವಿಧ ಮಹಾವಿದ್ಯಾಲಯಗಳ ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರಿಗೆ ಮಹಾವಿದ್ಯಾಲಯದ ಪ್ರಾಚಾರ್ಯರು ಧನ್ಯವಾದಗಳನ್ನು ತಿಳಿಸಿದ್ದಾರೆ.