ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಮಾಧ್ಯಮದವರಿಗೆ ಉತ್ತ್ತರಿಸದ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ.

ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಮಾಧ್ಯಮದವರಿಗೆ ಉತ್ತ್ತರಿಸದ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ. State President Dr. Mahesh Joshi did not respond to the media at the Kannada Sahitya Parishad meeti

ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ಮಾಧ್ಯಮದವರಿಗೆ ಉತ್ತ್ತರಿಸದ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ. 

ಜಮಖಂಡಿ 05: ನಗರದ ಖಾಸಗಿ ಹೋಟೆಲೊಂದರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯಕಾರಿಣಿ ಸಭೆಯು ಜರುಗಿತು. ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಅವರು  ಮಾಧ್ಯಮದವರ ಪ್ರಶ್ನೆಗೆ ಯಾವುದಕ್ಕೂ ಉತ್ತರಿಸದೆ ಸಿಡಿಮಿಡಿಗೊಂಡು ನಿರಾಕರಿಸಿದ ಪ್ರಸಂಗ ನಡೆಯಿತು.  

ರಾಜ್ಯದ ಮೂಲೆಯಿಂದ ಹಂದಿನೆಂಟಕ್ಕೂ ಹೆಚ್ಚು ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳ ಸಭೆಗೆ ಹಾಜರಾಗಿದ್ದು. ಸಂಜೆ ಸುಮಾರಿಗೆ 4 ಘಂಟೆಗೆ ಪ್ರಾರಂಭವಾದ ಸಭೆಯು ಸುಮಾರು ಸಂಜೆ 6 ಗಂಟೆಗೆ ಮುಕ್ತಾಯಗೊಂಡಿತ್ತು. ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎನ್ನಲಾಗಿದೆ. ಸಭೆಯು ಮುಕ್ತಾಯಗೊಂಡ ಬಳಿಕ ಮಾಧ್ಯಮದವರು ರಾಜ್ಯಾಧ್ಯಕ್ಷ ಡಾ, ಮಹೇಶ ಜೋಶಿ ಅವರನ್ನು ಬಳ್ಳಾರಿ ಜಿಲ್ಲೆ ಸಂಡರುನಲ್ಲಿ ಹಾಗೂ ಕಲ್ಲಹಳ್ಳಿ ಗ್ರಾಮದಲ್ಲಿ ನಡೆಯಬೇಕಾದ ಸಭೆ ಯಾಕೆ ರದ್ದಾಯಿತು. ಸಭೆಯಲ್ಲಿ ಯಾವ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎಂಬ ಪ್ರಶ್ನೆಗೆ. ಯಾವದಕ್ಕೂ ಉತ್ತರಿಸಿದೆ ಸಿಡಿಮಿಡಿಗೊಂಡು ನಿರಾಕರಿಸಿದರು.