ರೈತ ಸಂಘವನ್ನು ಮತ್ತೆ ಬಲಿಷ್ಠವಾಗಿ ಕಟ್ಟಲು ಎಲ್ಲರೂ ಕೈಜೋಡಿಸಬೇಕೆಂದು: ರಾಜ್ಯಾಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ಹೇಳಿದರು
State President Pacche Nanjundaswamy said that everyone should join hands to make Raitha Sangh stro
ರೈತ ಸಂಘವನ್ನು ಮತ್ತೆ ಬಲಿಷ್ಠವಾಗಿ ಕಟ್ಟಲು ಎಲ್ಲರೂ ಕೈಜೋಡಿಸಬೇಕೆಂದು: ರಾಜ್ಯಾಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ಹೇಳಿದರು
ರಾಯಬಾಗ: ಪ್ರೊ.ನಂಜುಂಡಸ್ವಾಮಿ ಅವರ ವಿಚಾರಧಾರೆಯನ್ನು ಇಂದಿನ ಯುವ ರೈತರಿಗೆ ತಿಳಿಸಿ ರೈತ ಸಂಘವನ್ನು ಮತ್ತೆ ಬಲಿಷ್ಠವಾಗಿ ಕಟ್ಟಲು ಎಲ್ಲರೂ ಕೈಜೋಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ಹೇಳಿದರು. ಸೋಮವಾರ ಪಟ್ಟಣದ ರೈತ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರೊ.ನಂಜುಂಡಸ್ವಾಮಿ ಅವರ 21ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರ ಶ್ರೇಯೋಭಿವೃದ್ಧಿಗಾಗಿ ಒಡೆದು ಹೋದ ಕರ್ನಾಟಕ ರಾಜ್ಯ ರೈತ ಸಂಘಗಳನ್ನು ಒಟ್ಟುಗೂಡಿಸಲು ಏಕೀಕರಣ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಪ್ರೊ.ನಂಜುಂಡಸ್ವಾಮಿ ಅವರ ಕನಸು ನನಸು ಮಾಡಲು ಪ್ರೊ.ನಂಜುಂಡಸ್ವಾಮಿ ಅವರ ಜೊತೆ ಇದ್ದ ಹಿರಿಯರು ನಮಗೆಲ್ಲ ಮಾರ್ಗದರ್ಶನ ಮಾಡಬೇಕೆಂದರು. ತಾಲೂಕಾಧ್ಯಕ್ಷ ವಿಜಯ ಶ್ರೇಷ್ಠಿ, ರೈತ ಮುಖಂಡರಾದ ಚುನ್ನಪ್ಪ ಪೂಜಾರಿ, ಫಯಾಜ್, ಮಲ್ಲಪ್ಪ ಅಂಗಡಿ, ಮಾಯಗೌಡ ಪಾಟೀಲ, ದೀಲೀಪ ಸಮಾಜೆ, ಅಪ್ಪಾಸಾಬ ಮಾನೆ, ಮಹಾದೇವ ಪಾಟೀಲ, ಶ್ರೀಶೈಲ ಸಾಬಾನೆ, ನಿಂಗಪ್ಪ ಪೂಜೇರಿ, ಸುಲ್ತಾನ ಪೂಜಾರಿ, ಭೀಮಸೇನ ಪಿಸಾಳೆ ಹಾಗೂ ರೈತ ಸಂಘದ ಮುಖಂಡರು ಇದ್ದರು.ಫೋಟೊ: 03 ರಾಯಬಾಗ 1ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ರೈತ ಕಚೇರಿಯಲ್ಲಿರುವ ಪ್ರೊ.ನಂಜುಂಡಸ್ವಾಮಿ ಅವರ ಮೂರ್ತಿಗೆ ಪುಷ್ಪ ನಮನ ಸಲ್ಲಿಸುತ್ತಿರುವ ಗಣ್ಯರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 