ಯೂರಿಯಾ, ರಸಗೊಬ್ಬರ ಅಭಾವಕ್ಕೆ ರಾಜ್ಯ ಸರಕಾರವೇ ಕಾರಣ: ಶ್ರೀಶೈಲಗೌಡ ಕಿಡಿ
State government is responsible for shortage of urea and fertilizer: Srisailagowda Kidi
ಯೂರಿಯಾ, ರಸಗೊಬ್ಬರ ಅಭಾವಕ್ಕೆ ರಾಜ್ಯ ಸರಕಾರವೇ ಕಾರಣ: ಶ್ರೀಶೈಲಗೌಡ ಕಿಡಿ
ಸಿಂದಗಿ 07: ರಾಜ್ಯದಲ್ಲಿ ಯೂರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ರಾಜ್ಯ ಸರ್ಕಾರದ ಅಸಹಕಾರ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರ ಸರ್ಕಾರದ ಮೇಲೆ ಕಿಡಿಕಾರಿದರು .
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಈ ಬಾರಿ ಸರ್ಕಾರದ ಅಸಹಕಾರ ಮತ್ತು ನಿರ್ಲಕ್ಷ್ಯದಿಂದ ಯೂರಿಯಾ ಗೊಬ್ಬರ ಅಭಾವ ಉಂಟಾಗಿದ್ದು, ಇದರಿಂದ ಕೆಲವು ಕಡೆಗಳಲ್ಲಿ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗುತ್ತಿದೆ. ಇನ್ನೂ ಅನೇಕ ಕಡೆಗಳಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಮುಂಗಾರು ಪ್ರಾರಂಭದಲ್ಲೇ ಮಳೆಯ ಹವಾಮಾನ ವೈಪರೀತ್ಯವನ್ನು ತಜ್ಞರಿಂದ ಮಾಹಿತಿ ಪಡೆದು ಹೆಚ್ಚಿನ ದಾಸ್ತಾನು ತರಿಸಲು ಮುತುವರ್ಜಿ ವಹಿಸಬೇಕಾಗಿತ್ತು, ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ, ಈಗಲೂ ಈ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಒಂದು ವಾರದೊಳಗಡೆ ಹೆಚ್ಚಿನ ದಾಸ್ತಾನು ತರಿಸುವ ಮೂಲಕ ರೈತರಿಗೆ ನೆರವಾಗುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 