20ರಂದು ರಾಜ್ಯ ಮಟ್ಟದ ಮ್ಯಾರಥಾನ್
ಲೋಕದರ್ಶನ ವರದಿ
ಕೊಪ್ಪಳ 17: ನಗರದಲ್ಲಿ ಇತಿಹಾಸ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯ ಪ್ರಯುಕ್ತ ರಾಜ್ಯ ಮಟ್ಟದ ಮ್ಯಾರಥಾನ್-2019, ಪ್ರತಿ ವರ್ಷದಂತೆ ಈ ವರ್ಷವು ಕೊಪ್ಪಳ ಅಥ್ಲೇಟಿಕ್ಸ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ದಿ. 20 ಜನೆವರಿ 2019ರಂದು ಅಯೋಜಿಸಲಾಗಿದೆ. ಮ್ಯಾರಥಾನ್ ಓಟವು ಮಹಿಳಾ ಮತ್ತು ಪುರುಷಗಾಗಿ ಅಯೋಜನೆ ಮಾಡಲಾಗಿದ್ದು ಪುರುಷರ ಮ್ಯಾರಥಾನ್ ಓಟಕ್ಕೆ ಸಂಸದರಾದ ಕರಡಿ ಸಂಗಣ್ಣ ಹಾಗೂ ಜಿಲ್ಲಾಧಿಕಾರಿ ಪಿ.ಸುನಿಲ್ಕುಮಾರ್ ಚಾಲಾನೆ ನೀಡುವರು. ಮಹಿಳಾ ಮ್ಯಾರಥಾನ್ ಓಟಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಚಾಲಾನೆ ನೀಡುವರು.
ಪುರುಷರ ಓಟ ಹೊಸಪೇಟೆ ರಸ್ತೆ ಹಾಲವತರ್ಿ ಕ್ರಾಸ್ ನಿಂದ ಪ್ರಾರಂಭಗೊಂಡು ಮಳೆಮಲ್ಲೇಶ್ವರ ಕ್ರಾಸ್ಗೆ ಕೊನೆ ಗೊಳ್ಳುತ್ತದೆ. ಮಹಿಳೆಯರ ಮ್ಯಾರಥಾನ್ ಓಟವು ಹೊಸಪೇಟೆ ರಸ್ತೆ ಹಾಲವತರ್ಿ ಕ್ರಾಸ್ ನಿಂದ ಪ್ರಾರಂಭಗೊಂಡು ಗೌರಿಶಂಕರ ದೇವಸ್ಥಾನದ ಹತ್ತಿರ ಕೊನೆಗೋಳ್ಳುತ್ತದೆ. ಓಟದ ಮಧ್ಯೆ ನೀರಿನ ವ್ಯವಸ್ಥೆ ಮಾಡಲಾಗಿದೆ. ಹಾಗೂ ದಿ.23, 24, ಜನೆವರಿ 2019ರಂದು ಪುರುಷರಿಗಾಗಿ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿಗಳು ಗವಿಸಿದ್ದೇಶ್ವರ ಮಹಾವಿದ್ಯಾಲಯ ಮೈದಾನದಲ್ಲಿ ಅಯೋಜಿಸಲಾಗಿದೆ ಎಂದು ಅಯೋಜಕರಾದ ಶ್ರೀನಿವಾಸ ಗುಪ್ತ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು. ಈ ಸಂದರ್ಭದಲ್ಲಿ ಶರರಣಬಸವ ಬಂಡಿಹಾಳ್, ಬಸವರಾಜ್, ವಿಠಲ್, ಬಸವರಾಜ್ ಹೋಸಮನಿ ಇನ್ನು ಮುಂತಾದವರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 