ಸಿರಿಗೇರಿಯಲ್ಲಿ ಕನಕದಾಸರ ಮತ್ತು ಸಂಗೊಳ್ಳಿ ರಾಯಣ್ಣ ಪುತ್ಥಳಿ ಉದ್ಘಾಟನೆ
Statues of Kanakadasa and Sangolli Rayanna inaugurated in Sirigeri
ಬಳ್ಳಾರಿ 13 : ಸಿರಿಗೇರಿ ಗ್ರಾಮದ ಮುಖ್ಯ ವೃತ್ತದ ಹತ್ತಿರ ಕುರುಬ ಸಮುದಾಯದಿಂದ ಕನಕದಾಸ ಯುವಕ ಸಂಘ ಮತ್ತು ಸಂಗೋಳ್ಳಿ ರಾಯಣ್ಣ ಯುವಕ ಸಂಘ ನೇತೃತ್ವದಲ್ಲಿ ದಾಸ ಶ್ರೇಷ್ಠ ಕನಕದಾಸರ ಪುತ್ತಳಿ ಮತ್ತು ವೀರ ಸಂಗೊಳ್ಳಿ ರಾಯಣ್ಣ ಇವರ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮ ಸಂಭ್ರಮದಿಂದ ನೆರವೇರಿಸಲಾಯಿತು. ತಿಂತಿಣಿ ಮಠದ ಸಿದ್ದರಾಮಯ್ಯನಂದಪೂರಿ ಮಹಾಸ್ವಾಮಿಗಳು ಉಭಯ ಮೂರ್ತಿಗಳನ್ನು ಉದ್ಘಾಟನಾ ಗೊಳಿಸಿ ಲೋಕಾರೆ್ಣ ಮಾಡಿದರು,ವೇದಿಕೆ ಕಾರ್ಯಕ್ರಮದಲ್ಲಿ ಗಣ್ಯರಿಗೆ ಸನ್ಮಾನ ಮತ್ತು ಶ್ರೀಗಳಿಗೆ ತುಲಾಭಾರ ನೆರವೇರಿಸಲಾಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಬಿ.ಮುರಳಿ ಕೃಷ್ಣ ನವರು 21 ಸಾವಿರ ರೂಪಾಯಿಗಳು ದೇಣಿಗೆ ಆಪ್ತರ ಮೂಲಕ ಕಳಿಸಿಕೊಟ್ಟಿದ್ದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಎಲ್.ಗಾದಿಲಿಂಗ ಗೌಡರು ಸಿರುಗುಪ್ಪ ತಾಲೂಕ ಕುರುಬರ ಸಂಘದ ಅಧ್ಯಕ್ಷರಾದ ಸೋಮಪ್ಪನವರು ಪ್ರಧಾನ ಕಾರ್ಯದರ್ಶಿಗಳಾದ ಕರಿಬಸಪ್ಪ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ರಾಜ್ಯ ಅಧ್ಯಕ್ಷರಾದ ಬಿ.ಎಂ.ಪಾಟೀಲ್ ಉಪಾಧ್ಯಕ್ಷರಾದ ಅಯ್ಯಾಳಪ್ಪ ನಾಡಂಗ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದ್ಯಸರು,ಸಮಾಜದ ಮುಖಂಡರು ಗ್ರಾಮದ ಗುರು-ಹಿರಿಯರು,ಯುವಕರು ಭಾಗವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 