ರಸ್ತೆ ಸುರಕ್ಷತೆ ಕುರಿತು ಬೀದಿ ನಾಟಕ ಪ್ರದರ್ಶನ
Street drama performance on road safety
ರಸ್ತೆ ಸುರಕ್ಷತೆ ಕುರಿತು ಬೀದಿ ನಾಟಕ ಪ್ರದರ್ಶನ
ಯಮಕನಮರಡಿ 29 : ಇತ್ತಿಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುಹೆಚ್ಚಿಗೆ ನಡೆಯುತ್ತಿದ್ದು ಈ ಕುರಿತು ಪ್ರಯಾಣಿಕರು ಹಾಗೂ ಪಾದಚಾರಿಗಳಿಗೆ ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿವಿಧ ಸ್ಥಳಗಳಲ್ಲಿ ಬೀದಿ ನಾಟಕದ ಮೂಲಕ ರಸ್ತೆ ಸುರಕ್ಷತೆ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹತ್ತರಗಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ಹತ್ತರಗಿ ಟೂಲ್ ನಾಕಾ ಆವರಣದಲ್ಲಿ ದಿ 28 ರಂದು ದುಳಗನವಾಡಿ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನವನ್ನು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆ ಬೆಳಗಾವಿ ಇವರ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಮುಖ್ಯಸ್ಥರಾದ ರವೀಂದ್ರ ವಾದ್ಯ ನುಡಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು. ಸುರೇಖಾ ಪಾಟೀಲ , ಪ್ರಸಾದಗಿರಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 