ತಂಬಾಕು ಪದಾರ್ಥಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ
Street play on the ill effects of tobacco use
ತಂಬಾಕು ಪದಾರ್ಥಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ
ಬಳ್ಳಾರಿ 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಚಿಗುರು ಕಲಾತಂಡ ಇಬ್ರಾಹಿಂಪುರ ಇವರ ಸಂಯುಕ್ತಾಶ್ರಯದಲ್ಲಿ ತಂಬಾಕು ಪದಾರ್ಥಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಸೋಮವಾರ ಕುರುಗೋಡು ತಾಲ್ಲೂಕಿನ ಕೋಳೂರು ಮತ್ತು ದಮ್ಮೂರು ಗ್ರಾಮಗಳಲ್ಲಿ ಬೀದಿ ನಾಟಕ ಮತ್ತು ಜನಪದ ಗೀತೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮವನ್ನು ಕೋಳೂರು ಗ್ರಾಪಂ ಅಧ್ಯಕ್ಷರಾದ ದೊಡ್ಡಬಸಮ್ಮ ಹಾಗೂ ದಮ್ಮೂರು ಗ್ರಾಪಂ ನ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮಲ್ಲಿಕಾರ್ಜುನ ಅವರು ಉದ್ಘಾಟಿಸಿದರು. ನಂತರ ಚಿಗುರು ಕಲಾ ತಂಡದ ವತಿಯಿಂದ ಜನಪದ ಗೀತೆಗಳ ಮೂಲಕ ಬೀದಿ ನಾಟಕ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಕೋಳೂರು ಮತ್ತು ದಮ್ಮೂರು ಗ್ರಾಮಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಪ್ರಶಾಂತ್, ಸಾಮಾಜಿಕ ಕಾರ್ಯಕರ್ತೆ ಸರಸ್ಪತಿ, ಆರೋಗ್ಯ ನೀರೀಕ್ಷಣಾಧಿಕಾರಿಗಳಾದ ವಿರೇಶ್, ಸಿದ್ದಮ್ಮ, ಬಿ.ಎಂ.ಬಸವ, ಶಂಕ್ರಮ್ಮ ಹಾಗೂ ಗ್ರಾಮದ ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕರು, ಊರಿನ ಮುಖಂಡರು ಹಾಗೂ ಚಿಗುರು ಕಲಾ ತಂಡದ ಕಲಾವಿದರಾದ ಹುಲುಗಪ್ಪ, ಎಸ್.ಎಂ.ಹನುಮಯ್ಯ, ಹೆಚ್.ಜಿ.ಸುಂಕಪ್ಪ, ಬಿ.ಆನಂದ್, ಟಿ.ಹೇಮಂತ, ಸುನೀಲ್ ಸೇರಿದಂತೆ ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 