ಯೋಗದಿಂದ ಒತ್ತಡ ನಿರ್ವಹಣೆ
Stress management with yoga
ಬಳ್ಳಾರಿ 21: ಯೋಗವು ಮನಸ್ಸು, ದೇಹ ಮತ್ತು ಆತ್ಮವನ್ನು ಸಂಯೋಜಿಸುವ ಮೂಲಕ ಒತ್ತಡದ ಜೀವನವನ್ನು ನಿರ್ವಹಿಸಲು ಹಾಗೂ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ್ರೊ.ತಿ್ೇರುದ್ರ್ಪ ಅವರು ಹೇಳಿದರು.ವಿವಿಯ ಯೋಗ ಕೇಂದ್ರದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಾರದಲ್ಲಿ ಮೂರು ದಿನಗಳ ‘ಯೋಗ, ಪ್ರಾಣಾಯಾಮ ಮತ್ತು ಧ್ಯಾನ ತರಗತಿಗಳ’ ಕಾರ್ಯಕ್ರಮ ಪತಂಜಲಿ ಮಹರ್ಷಿಯವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಯೋಗವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದರಿಂದ ಗುರಿ ಸಾಧನೆಗೆ ಸಹಾಯವಾಗುತ್ತದೆ. ಅರೋಗ್ಯಕರ ಜೀವನಶೈಲಿಯನ್ನು ರೂಢಿಸುತ್ತದೆ. ಯೋಗ ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿ ಭಾಗವಹಿಸಿ ಎಂದರು.ವಿವಿಯ ಯೋಗ ಅಧ್ಯಯನ ವಿಭಾಗದ ಉಪನ್ಯಾಸಕ ಡಿ.ಮಹೇಶ ಬಾಬು ಅವರು ಯೋಗದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಸದ್ಯೋಜಾತಪ್ಪ, ಶಿಕ್ಷಣ ನಿಕಾಯದ ಡೀನ್ ಪ್ರೊ.ಸಾಹೇಬ್ಅಲಿ ನಿರಗುಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಡಾ.ಶಶಿಧರ ಕೆಲ್ಲೂರ ಗಣ್ಯರನ್ನು ಸ್ವಾಗತಿಸಿ, ನಿರೂಪಿಸಿದರು. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 