ತಾಂತ್ರಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಟ್ರೈನಿ ಇಂಜಿನಿಯರ್ ಹುದ್ದೆಗೆ ಆಯ್ಕೆ
Students of technical education institutes selected for the post of trainee engineer
ತಾಂತ್ರಿಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಟ್ರೈನಿ ಇಂಜಿನಿಯರ್ ಹುದ್ದೆಗೆ ಆಯ್ಕೆ
ಧಾರವಾಡ 24: ಪ್ರತಿಷ್ಠಿತ ಜನತಾ ಶಿಕ್ಷಣ ಸಮಿತಿಯ ಕೆ.ಎಚ್.ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮೆಕ್ಯಾನಿಕಲ್ ವಿಭಾಗದ 5, ಆಟೋಮೊಬೈಲ್ ವಿಭಾಗದ 11, ಒಟ್ಟು 16 ವಿದ್ಯಾರ್ಥಿಗಳು ಬೆಂಗಳೂರಿನ ಟೊಯೋಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ ಪ್ರೈ.ಲಿಮಿಟೆಡ್ ಕಂಪನಿಯಲ್ಲಿ ಡಿಪ್ಲೋಮಾ ಟ್ರೈನಿ ಇಂಜಿನಿಯರ್ ಹುದ್ದೆಗೆ ಆಯ್ಕೆಯಾಗಿರುತ್ತಾರೆ. ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಡಾ.ಅಜಿತ ಪ್ರಸಾದ ಅವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜನತಾ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ, ಮಂಜುನಾಥೇಶ್ವರ ಐಟಿಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆ, ಸಂಸ್ಥೆಯ ಪ್ರಾಚಾರ್ಯರಾದ ವೇದಾವತಿ ಆರ್.ತಿವಾರಿ, ಮೆಕ್ಯಾನಿಕಲ್ ಹಾಗೂ ಆಟೋಮೊಬೈಲ್ ವಿಭಾಗಗಳ ಮುಖ್ಯಸ್ಥರಾದ ಆರ್.ಬಿ.ಜೋಗಳೆ ಮತ್ತು ರವಿ ಯಮಕನಮರ್ಡಿ, ಪ್ಲೇಸಮೆಂಟ್ ಅಧಿಕಾರಿಗಳಾದ ಜಿ.ಬಿ.ಜಗದ ಹಾಗೂ ಜಯಶ್ರೀ ಅಳಗುಂಡಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 