ಸಮರ್ಪಕ ಬಸ್ ಸೇವೆಗೆ ಒತ್ತಾಯಿಸಿ ವಿದ್ಯಾಥರ್ಿಗಳ ಪ್ರತಿಭಟನೆ
ಯರಗಟ್ಟಿ 03: ಸರಿಯಾಗಿ ಬಸ್ ಇಲ್ಲದಿರುವುದರಿಂದ ಯರಗಣವಿ, ಕಡಬಿ, ಮಾಡಮಗೇರಿ, ಕೋ.ಶಿವಾಪೂರ, ಗೊರಗುದ್ದಿ ಗ್ರಾಮಗಳ ವಿದ್ಯಾಥರ್ಿಗಳು ಹಾಗೂ ಗ್ರಾಮಸ್ಥರು ಸ್ಥಳೀಯ ಕೆಎಸ್ಆರ್ಟಿಸಿ ನಿಯಂತ್ರಣಾಧಿಕಾರಿ ಕೊಠಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ವಿದ್ಯಾಥರ್ಿಗಳು ಮಾತನಾಡುತ್ತಾ ಹೆಚ್ಚಿನ ವ್ಯಾಸಂಗಕ್ಕಾಗಿ ಯರಗಟ್ಟಿಯಲ್ಲಿರುವ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಈ ಗ್ರಾಮಗಳಿಂದ ಹೋಗಲು ತುಂಬಾ ತೊಂದರೆಯಾಗುತ್ತಿದೆ. ಹತ್ತಕ್ಕೂ ಹೆಚ್ಚಿನ ಹಳ್ಳಿಗಳಿಂದ ಸುಮಾರು ಎರಡನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಥರ್ಿಗಳು ಮತ್ತು ಸಾರ್ವಜನಿಕರು ಪ್ರಯಾಣಿಸುತ್ತಿದ್ದು ಮುಂಜಾನೆ ಕಾಲೇಜು ಸಮಯಕ್ಕೆ ಒಂದೇ ಒಂದು ಬಸ್ ಬರುವುದರಿಂದ ಸ್ಥಳಾವಕಾಶ ಇಲ್ಲದಿರುವುದರಿಂದ ಎಷ್ಟೋ ಬಾರಿ ಕಾಲೇಜಿಗೆ ಗೈರಾಗುವ ಪರಿಸ್ಥಿತಿ ಉಂಟಾಗುತ್ತಿದೆ. ಇದರಿಂದ ಉತ್ತಮ ಶಿಕ್ಷಣ ಪಡೆಯುವ ಮಕ್ಕಳ ಹುಮ್ಮಸ್ಸಿಗೆ, ಕನಸಿಗೆ ತೊಂದರೆಯಾಗುತ್ತಿದೆ ಎಂದು ವಿದ್ಯಾಥರ್ಿಗಳು ತಮ್ಮ ಅಳಲನ್ನು ತೋಡಿಕೊಂಡರು.
ಬಸ್ ನಿಲ್ದಾಣದಿಂದ ಎಸ್.ಬಿ.ಜಕಾತಿ ಸರಕಾರಿ ಪದವಿ ಪೂರ್ವ ಕಾಲೇಜು ಎರಡು ಕೀ.ಮಿ ಮತ್ತು ಸಿ.ಎಮ್.ಮಾಮನಿ ಸರಕಾರಿ ಪದವಿ ಕಾಲೇಜು ಐದು ಕೀ.ಮಿ ಅಂತರವಿದ್ದು ನಿಲ್ದಾಣದ ಅಧಿಕಾರಿಗಳು ಬಸ್ ಚಾಲಕರಿಗೆ ಮತ್ತು ನಿವರ್ಾಹಕರಿಗೆ ಕಾಲೇಜುಗಳಿಗೆ ನಿಲುಗಡೆ ಮಾಡಲು ಆದೇಶ ನೀಡಿದರೂ ಸರಿಯಾಗಿ ಬಸ್ ನಿಲುಗಡೆ ಮಾಡುತ್ತಿಲ್ಲ. ಇಲ್ಲಿ ಒರ್ವ ಕೆಎಸ್ಆರ್ಟಿಸಿ ಸಿಬ್ಬಂದಿ ನೇಮಿಸಿ ಬಸ್ ನಿಲುಗಡೆ ಮಾಡುವಂತಾಗಬೇಕು. ನಮ್ಮ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 