ವಿದ್ಯಾರ್ಥಿಗಳು ಐ.ಎ.ಎಸ್., ಐ.ಪಿ.ಎಸ್ ಗಳಾಗಬೇಕು: ಜಿಲ್ಲಾಧಿಕಾರಿ.
Students should become IAS and IPS: District Collector.
ಕಾರವಾರ, ನ.12:- ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಅಗಾಧವಾದ ಶಕ್ತಿ-ಸಾಮರ್ಥ್ಯ ಇದ್ದು, ನಿರಂತರ ಶ್ರಮಪಟ್ಟರೇ ಋಖ, ಋಖ ಆಗಲು ಸಾಧ್ಯವಿದೆ. ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಸದಾ ಬೆಂಬಲ ನೀಡಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಕಾಲೇಜಿನಲ್ಲಿ ಕಾರ್ಯಗಾರ ಹಮ್ಮಿಕೊಳ್ಳುವುದಾಗಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು.
ಅವರು ಮಂಗಳವಾರ ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ನಲ್ಲಿ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ಎನ್.ಸಿ.ಸಿ, ರೋವರ್ಸ್-ರೇಂಜರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ಉದ್ಘಾಟನೆ ನರೆವೇರಿಸಿ ಮಾತನಾಡಿದರು.
ಜೀವನದ ಪಯಣದಲ್ಲಿ ಅನೇಕ ಸಮಸ್ಯೆಗಳ ಸರಮಾಲೆಗಳು ಎದುರಾಗಲಿದ್ದು, ಇವುಗಳನ್ನು ಎದುರಿಸಿ ತಮ್ಮ ಗುರಿ ಸಾಧನೆಗೆ ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರಾಂಶುಪಾಲರಾದ ಗೀತಾ ವಾಲೇಕರ್, ವಾರ್ಷಿಕ ಸಂಚಿಕೆಯ ಸಂಚಾಲಕ ಡಾ. ಬಸವರಾಜ ದಳವಾಯಿ, ಐ.ಕ್ಯೂ.ಎ.ಸಿ. ಸಂಚಾಲಕ ವಿಜಯಶ್ರೀ ಎಸ್. ಗಾಂವಕರ , ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಾ. ಶಿವಾನಂದ ನಾಯಕ, ಖಜಾಂಜಿ ಪ್ರಕಾಶ್ ರಾಣೆ ಮತ್ತಿತರರು ಉಪಸ್ಥಿತರಿದ್ದರು.
ಕಲಾವೇದಿಕೆಯ ಸಂಚಾಲಕಿ ಡಾ. ಮುನಿರತ್ನಮ್ಮ ಎಲ್.ಎಂ, ಸ್ವಾಗತಿಸಿದರು. ಯುನಿಯನ್ ಕಾರ್ಯಾಧ್ಯಕ್ಷ ಡಾ. ಮಹೇಂದ್ರಕುಮಾರ್ ಸಿ. ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ವನಿತಾ ಜಿ. ದೇಶಭಂಡಾರಿ ನಿರೂಪಿಸಿದರು.
ಕಾರ್ಯಕ್ರಮದಲ್ಲಿ 2024-25ನೇ ಸಾಲಿನ ವಾರ್ಷಿಕ ಸಂಚಿಕೆ ‘ವಿಶ್ವಂಭರ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಬೋಧಕ/ಬೋಧಕೇತರ ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 