ಸತತ ಅಧ್ಯಯನದಿಂದ ಸಾಧನೆ ಸಾಧ್ಯ : ಎಸ್. ಪಾಟೀಲ್
Success is possible through continuous study: S. Patil
ಸತತ ಅಧ್ಯಯನದಿಂದ ಸಾಧನೆ ಸಾಧ್ಯ : ಎಸ್. ಪಾಟೀಲ್
ಹೂವಿನ ಹಡಗಲಿ 14: ಎಲ್ಲಾ ವಿಷಯಗಳಲ್ಲಿ ಸತತ ಅಧ್ಯಯನದಿಂದ ಸಾಧನೆ ಮಾಡಬಹುದು ಎಂದು ಜಿ ಬಿ ಆರ್ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ ಎಸ್ ಎಸ್ ಪಾಟೀಲ್ ಹೇಳಿದರು. ಪಟ್ಟಣದ ಸಾರ್ವಜನಿಕ ಶಾಖಾ ಗ್ರಂಥಾಲಯದಲ್ಲಿ ಸರ್ಕಾರಿ ನೌಕರರ ಸಂಘ, ಶಾಖಾ ಗ್ರಂಥಾಲಯ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಅವರು ಮಾತನಾಡಿದರು.ನಿಮ್ಮ ಪದವಿ ಹಂತದ ಪಠ್ಯಕ್ರಮದ ಜೊತೆಗೆ ದೇಶದ ವಿಶ್ವದ ಪ್ರಚಲಿತ ವಿದ್ಯಮಾನಗಳು, ಸಾಧನೆಗಳು,ಸಂಶೋಧನೆಗಳು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಆಳವಾದ ಅಧ್ಯಯನ ಅಗತ್ಯ ಎಂದು ತಿಳಿಸಿದರು.ಪ್ರತಿದಿನ ದಿನ ಪತ್ರಿಕೆಗಳು, ನಿಯತಕಾಲಿಕೆಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳ ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಿದರೆ ಅಂಕ ಗಳಿಕೆ ಸುಲಭವಾಗುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಸಾರ್ವಜನಿಕ ಗ್ರಂಥಾಲಯದ ಸದುಪಯೋಗ ಪಡಿಸಿಕೊಳ್ಳಬೇಕು. ಉಚಿತವಾಗಿ ಲಭ್ಯ ಆಗುವ ಅನೇಕ ವೈವಿಧ್ಯಮಯ ವಿಷಯಗಳ ಪುಸ್ತಕಗಳು ಗ್ರಂಥಾಲಯದಲ್ಲಿ ಓದಲು ಸಿಗುತ್ತವೆ ಎಂದು ಹೇಳಿದರು.ಶಾಖಾ ಗ್ರಂಥಾಲಯಾಧಿಕಾರಿ ಮಂಜುನಾಥ ಬೋವಿ ಪ್ರತಿ ತಿಂಗಳು ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಕುರಿತು ಉಪನ್ಯಾಸ ಏರಿ್ಡಸಲಾಗುತ್ತಿದೆ ಎಂದು ತಿಳಿಸಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 