ಯಶಸ್ವಿಯಾಗಿ ಜರುಗಿದ ‘ವಸತಿ ಸಹಿತ ಉಚಿತ ಶಿಕ್ಷಣ’ ಸ್ಪರ್ಧಾತ್ಮಕ ಪರೀಕ್ಷೆ
Successfully conducted ‘Free Education with Housing’ competitive examination
ಲೋಕದರ್ಶನ ವರದಿ
ವರದಿ: ಅಡಿವೇಶ ಮುಧೋಳ
ಬೆಟಗೇರಿ 08: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಅಕ್ಷರದಾಸೋಹಿ ದಿ. ಎಸ್.ಎಸ್.ಹೊರಟ್ಟಿ ವಿದ್ಯಾ ವಿಕಾಸ ಪ್ರತಿಷ್ಠಾನದ ಅಡಿಯಲ್ಲಿ ವಸತಿ ಸಹಿತ ಉಚಿತ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆ ರವಿವಾರ ಮಾ.8ರಂದು ಯಶಸ್ವಿಯಾಗಿ ಜರುಗಿತು.
ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಪ್ರಸ್ತುತ 3 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಯಿತು. ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 600ಕ್ಕೂ ಅಧಿಕ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಈ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದರು.
ಈ ಪರೀಕ್ಷೆಯಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ 4 ಮತ್ತು 5 ನೇ ತರಗತಿಗೆ 2 ವರ್ಷ ಕನ್ನಡ ಮಾಧ್ಯಮದಲ್ಲಿ ಸಂಪೂರ್ಣ ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುವುದು ಎಂದು ಪ್ರತಿಷ್ಠಾನದ ಆಯೋಜಕ ಸಮಿತಿ ಸಂಚಾಲಕ ರವಿ ಭರಮನಾಯ್ಕ ತಿಳಿಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿ ಪಾಲಕರು ಶಾಲಾ ಮಕ್ಕಳು, ನಾಗರಿಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 