ಕಿರಿಯ ಕುಂಭಮೇಳಕ್ಕೆ ಸೂಡಿ ಶ್ರೀಗಳು ಭೇಟಿ

ಕಿರಿಯ ಕುಂಭಮೇಳಕ್ಕೆ  ಸೂಡಿ ಶ್ರೀಗಳು  ಭೇಟಿ  Sudi Sri visits the Junior Kumbh Mela

ಗದಗ 17: ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯ ಅಡಿಯಲ್ಲಿ ನಾಗಾಸಾಧು ಶ್ರೀ ಸಹದೇವಾನಂದ ಗಿರಿ ಜಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಕಿರಿಯ ಕುಂಭಮೇಳಕ್ಕೆ  ಸೂಡಿ ಜುಕ್ತಿ ಹಿರೇಮಠದ ಶ್ರೀಗಳು ಯಜ್ಞ ಶಾಲೆಗೆ ಭೇಟಿ ನೀಡಿ ಶುಭ ಹಾರೈಸಿದರು.  ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸೇವಾ ಸಮಿತಿಯ ಉಪಾಧ್ಯಕ್ಷ ಎಸ್‌.ಎಚ್‌.ಶಿವನಗೌಡ್ರ, ರವಿ ಗುಂಜೀಕರ, ರಮೇಶ ಸಜ್ಜಗಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.