ಸುಮಿತ್ರಾ ಮೆಣಸಿಕಾಯಿ ಅವರಿಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ
Sumitra Menasikai presented with State Youth Award
ಗದಗ 21: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಜನ ಒಕ್ಕೂಟ ಮಂಗಳೂರು ಇವರ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇವರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ನಿಮಿತ್ತವಾಗಿ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯಿಂದ ಕುಮಾರಿ ಸುಮಿತ್ರಾ ಮೆಣಸಿಕಾಯಿ ಅವರಿಗೆ ರಾಜ್ಯ ಯುವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸರ್ವಾಧ್ಯಕ್ಷರಾದ ಸುಳ್ಯ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರತಿ ಅವರು ಮಾತನಾಡಿ,
ಈ ಯುವ ಸಂಭ್ರಮ ಕಾರ್ಯಕ್ರಮ ನಮ್ಮೆಲ್ಲರಿಗೂ ಪ್ರೇರಣೆ ನಿಜಕ್ಕೂ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 31 ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನಿಸಿದ್ದು ಶ್ಲಾಘನೀಯ ಮತ್ತು ಅವಿಸ್ಮರಣೀಯ ಎಂದು ಹೇಳಿದರು. ರಾಜ್ಯ ಒಕ್ಕೂಟಗಳ ರಾಜ್ಯಾಧ್ಯಕ್ಷ ಎಸ್. ಬಾಲಾಜಿ ಅವರು ಮಾತನಾಡಿ, ಗದಗ ಜಿಲ್ಲೆಯಿಂದ ಆಯ್ಕೆಯಾದ ಕುಮಾರಿ ಸುಮಿತ್ರಾ ಮೆಣಸಿಕಾಯಿ ಅವರ ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣ ಮತ್ತು ಹತ್ತು ಹಲವಾರು ಕಾರ್ಯಗಳಲ್ಲಿ ತೊಡಗಿ ಸ್ಪೂರ್ತಿದಾಯಕರಾಗಿದ್ದು ಅವರ ಸೇವೆ ಇನ್ನು ಉನ್ನತಿಗಾಗಿ ಭವಿಷ್ಯದಲ್ಲಿ ಅವರ ಕಾರ್ಯಗಳು ಸಮಾಜಕ್ಕೆ ತಲುಪಿ ಉನ್ನತ ಸ್ಥಾನ ಪಡೆಯಲಿ ಎಂದು ಆಶಿಸುತ್ತೇವೆ ಎಂದುಹೇಳಿದರು. ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾದ ಪವನ್ ಪಲ್ಲತ್ಕಡ್ಕ್ ಸೇರಿದಂತೆ ನಾಡಿನ ಯುವ ಸಾಧಕರು ಯುವ ನೇತಾರರು ಹಾಗು ವಿವಿಧ ಸಂಘ-ಸಂಸ್ಥೆಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 