ಬಿಸಿಲಿನ ಬೇಗೆ: ಜನ, ಜಾನುವಾರುಗಳಿಗೆ ಮರಗಳೇ ಆಶ್ರಯ
ಬಿಸಿಲಿನ ಪ್ರಮಾಣ ಹೆಚ್ಚಾದ ನಂತರ ಮನುಷ್ಯರ ಜೊತೆ ಜಾನುವಾರುಗಳ ಸಹ ಮರದ ನೆರಳಿಗೆ ವಿಶ್ರಾಂತಿ ಪಡೆಯುತ್ತವೆ.
ಸಂಬರಗಿ 23: ಗಡಿ ಗ್ರಾಮಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗಿ ಜನರಿಗೆ ಹಾಗೂ ಜಾನುವಾರುಗಳಿಗೆ ಬಿಸಿಲಿನ ಬೇಗೆ ತಡೆಯಲಾರದಾಗಿದೆ. ಮುಂಜಾನೆ 11ರಿಂದ ಸಾಯಂಕಾಲ 5ಗಂಟೆಯವರೆಗೆ ಬಿಸಿಲಿನಿಂದ ಮನುಷ್ಯರ ಜೊತೆ ಜಾನುವಾರುಗಳು ಸಹ ಗಿಡ ಮರಗಳ ಆಶ್ರಯ ಪಡೆಯುತ್ತಿದ್ದಾರೆ. ಸುಮಾರು 5ಗಂಟೆಗಳ ಕಾಲ ಬಿಸಿಲಿನ ಸಲುವಾಗಿ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸುತ್ತಾರೆ.
ಕಳೆದ ಒಂದು ತಿಂಗಳಿನಿಂದ ನೀರಿಲ್ಲದೆ ಬತ್ತಿರುವ ಹಿಂಗಾರಿ ಬೆಳೆಗಳಾದ ಜೋಳ, ಕಡಲೆ, ಗೋಧಿ ಸೇರಿದಂತೆ ಅನೇಕ ಬೆಳೆಗಳನ್ನು ಕೊಯ್ಲು ಮಾಡಿದ ನಂತರ ಸಂಪೂರ್ಣ ಜಮೀನು ಬರಡು ಕಾಣುತ್ತಿದೆ. ಜಾನುವಾರುಗಳಿಗೆ ಮೇವಿಲ್ಲ, ರೈತರಿಗೆ ಕುಡಿಯಲು ನೀರಿಲ್ಲ ಇಂತಹ ಸ್ಥಿತಿ ಎದುರಿಸಬೇಕಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಮಾಡಿದ ಕೂಲಿಗಾರರಿಗೆ ಕಳೆದ ಮೂರು ತಿಂಗಳಿನಿಂದ ವೇತನ ಪಾವತಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಗಡಿ ಭಾಗದ ಜನರು ಸಿಕ್ಕುಹಾಕಿಕೊಂಡು ಬಳಲುತ್ತಿದ್ದಾರೆ. ರೈತರು ಬೆಳಗಿನ ಜಾವ ತಮ್ಮ ಜಾನುವಾರುಗಳನ್ನು ಮೇಯಲು ಬಿಡುತ್ತಾರೆ. 11 ಗಂಟೆ ಆದನಂತರ ಜಾನುವಾರುಗಳು ಬಿಸಿಲಿನಿಂದ ಮರದ ನೆರಳಿನಲ್ಲಿ ವಿಶ್ರಾಂತಿ ಪಡೆಯುತ್ತವೆ.
ಸಂಬರಗಿ ಶಿರೂರ, ಪಾಂಡೇಗಾಂವ, ಖಿಳೇಗಾಂವ, ಅರಳಿಹಟ್ಟಿ, ಮಲಾಬಾದ, ಜಂಬಗಿ, ಮದಬಾವಿ ಸೇರಿದಂತೆ ಈ ಭಾಗದ ಎಲ್ಲಾ ಗ್ರಾಮಗಳಲ್ಲಿ ಜಮೀನುಗಳು ಖಾಲಿ ಖಾಲಿ ಕಾಣುತ್ತಿವೆ. ಬಿಸಿಲಿನ ಪ್ರಮಾಣ ಹೆಚ್ಚು ಕಾಣುತ್ತಿದೆ. ತಾಪಕ್ಕೆ ವಯೋವೃದ್ಧರಿಗೆ, ಚಿಕ್ಕ ಮಕ್ಕಳಿಗೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ. ಒಟ್ಟಿನಲ್ಲಿ ಗಿಡಮರಗಳು ಮಾನವನಿಗಷ್ಟೇ ಅಲ್ಲ, ಪ್ರಾಣಿ ಪಕ್ಷಿಗಳಿಗೂ ಆಶ್ರಯ ಆಧಾರ. ಅವುಗಳ ಮಹತ್ವವನ್ನರಿತು ಮಾನವ ಪರಿಸರ, ಗಿಡಮರ ರಕ್ಷಣೆಗೆ ಮುಂದಾಗಬೇಕಿದೆ. ಭೂಮಿಯಲ್ಲಿ ತಂಪು ಹಿಡಿದಿಡುವ ಮರ, ಕೆರೆ ಬಾವಿಗಳ ರಕ್ಷಣೆಗೆ ಮುಂದಾಗಬೇಕಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 