ಬೆಳೆ ಕಟಾವು ಮೇಲ್ವಿಚಾರಣೆ ಮಾಡಿದ:ಡಾ ಕನ್ನೂರ
Supervised the crop harvesting: Dr. Kannur
ಇಂಡಿ 10: ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ರವರು ಹಿಂಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಗುಡಿ ಗ್ರಾಮದ ಮುಂಗಾರು ಹಂಗಾಮಿನ ತೋಗರಿ (ಮಳೆಯಾಶ್ರಿತ) ಬೆಳೆಯ ನಮೂನೆ 2ರ ಕಟಾವು ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಿದ ಅವರು 2025 - 2026 ನೇ ಸಾಲಿನ ಬೆಳೆ ಅಂದಾಜು ಸಮೀಕ್ಷೆ ಅಡಿಯಲ್ಲಿ ತಾಲೂಕಿನ ಹಿಂಗಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಬರಗುಡಿ ಗ್ರಾಮದಲ್ಲಿ ತೊಗರಿ ಬೆಳೆಯ ಬೆಳೆ ಕಟಾವು ಪ್ರಯೋಗವನ್ನು ಮಾಡಿ.ಬೆಳೆ ಅಂದಾಜು ಸಮೀಕ್ಷೆ ಪ್ರಧಾನಮಂತ್ರಿ ಪಸಲ್ ಭೀಮಾ ಯೋಜನೆಯ ಹಾಗೂ ದೇಶದ ಆಮದು ರು್ತ ನಿರ್ಣಯಿಸುವಲ್ಲಿ ಪ್ರಮುಖ ಪಾತ್ರವಹಿಸುವುದರಿಂದ ಸಂಬಂಧಿಸಿದ ಅಧಿಕಾರಿಗಳು ನಿಯಮಾನುಸಾರವಾಗಿ ಪ್ರಯೋಗವನ್ನು ಕೈ ಗೊಳ್ಳಲು ಸೂಚನೆ ನೀಡಿದರು. ಈ ಸಮಯದಲ್ಲಿ ತಾಲೂಕ ಪಂಚಾಯತ್ ಸಿಬ್ಬಂದಿಗಳಾದ ರಾಜು ಚವ್ಹಾಣ ಎಂ ಬಿ ಕಲಾವಂತ, ಹಿಂಗಣಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ರಮೇಶ ಹೂಗಾರ, ಓರಿಯಂಟ್ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ಮಲ್ಲಿಕಾರ್ಜುನ್ ಬಿರಾದಾರ ಗ್ರಾಮದ ರೈತರಾದ ಸುನೀಲ ಕ್ಷತ್ರಿ, ಸೋಮನಿಂಗ ಅಂಕಲಗಿ, ಲಕ್ಷ್ಮಣ ಶೆಂಡಗಿ, ಮಹಾದೇವ ಕಾಡಿಮಗೆರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 