ಬೆಳೆ ಕಟಾವು ಮೇಲ್ವಿಚಾರಣೆ ಮಾಡಿದ:ಡಾ ಕನ್ನೂರ
Supervised the crop harvesting: Dr. Kannur
ಇಂಡಿ 10: ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ ಭೀಮಾಶಂಕರ ಕನ್ನೂರ ರವರು ಹಿಂಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಗುಡಿ ಗ್ರಾಮದ ಮುಂಗಾರು ಹಂಗಾಮಿನ ತೋಗರಿ (ಮಳೆಯಾಶ್ರಿತ) ಬೆಳೆಯ ನಮೂನೆ 2ರ ಕಟಾವು ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಿದ ಅವರು 2025 - 2026 ನೇ ಸಾಲಿನ ಬೆಳೆ ಅಂದಾಜು ಸಮೀಕ್ಷೆ ಅಡಿಯಲ್ಲಿ ತಾಲೂಕಿನ ಹಿಂಗಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಬರಗುಡಿ ಗ್ರಾಮದಲ್ಲಿ ತೊಗರಿ ಬೆಳೆಯ ಬೆಳೆ ಕಟಾವು ಪ್ರಯೋಗವನ್ನು ಮಾಡಿ.ಬೆಳೆ ಅಂದಾಜು ಸಮೀಕ್ಷೆ ಪ್ರಧಾನಮಂತ್ರಿ ಪಸಲ್ ಭೀಮಾ ಯೋಜನೆಯ ಹಾಗೂ ದೇಶದ ಆಮದು ರು್ತ ನಿರ್ಣಯಿಸುವಲ್ಲಿ ಪ್ರಮುಖ ಪಾತ್ರವಹಿಸುವುದರಿಂದ ಸಂಬಂಧಿಸಿದ ಅಧಿಕಾರಿಗಳು ನಿಯಮಾನುಸಾರವಾಗಿ ಪ್ರಯೋಗವನ್ನು ಕೈ ಗೊಳ್ಳಲು ಸೂಚನೆ ನೀಡಿದರು. ಈ ಸಮಯದಲ್ಲಿ ತಾಲೂಕ ಪಂಚಾಯತ್ ಸಿಬ್ಬಂದಿಗಳಾದ ರಾಜು ಚವ್ಹಾಣ ಎಂ ಬಿ ಕಲಾವಂತ, ಹಿಂಗಣಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ರಮೇಶ ಹೂಗಾರ, ಓರಿಯಂಟ್ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ಮಲ್ಲಿಕಾರ್ಜುನ್ ಬಿರಾದಾರ ಗ್ರಾಮದ ರೈತರಾದ ಸುನೀಲ ಕ್ಷತ್ರಿ, ಸೋಮನಿಂಗ ಅಂಕಲಗಿ, ಲಕ್ಷ್ಮಣ ಶೆಂಡಗಿ, ಮಹಾದೇವ ಕಾಡಿಮಗೆರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 