ಬೆಂಬಲ ಬೆಲೆ ಯೋಜನೆ: ಕಡಲೇಕಾಳು ಖರೀದಿ ಕೇಂದ್ರಗಳ ಪ್ರಾರಂಭ

Support Price Scheme: Start of Groundnut Buying Centres

ಬೆಂಬಲ ಬೆಲೆ ಯೋಜನೆ: ಕಡಲೇಕಾಳು ಖರೀದಿ ಕೇಂದ್ರಗಳ ಪ್ರಾರಂಭ

ಕೊಪ್ಪಳ 07: ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೇಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೇಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. 

ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌.ಎ.ಕ್ಯೂ ಗುಣಮಟ್ಟದ ಕಡಲೇಕಾಳು ಪ್ರತಿ ಕ್ವಿಂಟಾಲ್‌ಗೆ ರೂ. 5650 ಗಳಂತೆ ಎಕರೆಗೆ 4 ಕ್ವಿಂಟಾಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್‌ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿಯ ಸಭೆ ಜರುಗಿಸಿ, ಕೊಪ್ಪಳ ತಾಲ್ಲೂಕಿನ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ. ಕನಕಗಿರಿ ತಾಲ್ಲೂಕಿನ ನವಲಿ ಹಾಗೂ ಕನಕಗಿರಿ. ಕುಷ್ಟಗಿ ತಾಲ್ಲೂಕಿನ ಹನುಮಸಾಗರ, ತಾವರಗೇರಾ (ಮೆಣೇದಾಳ) ಹಾಗೂ ಕುಷ್ಟಗಿ. ಕುಕನೂರು ತಾಲೂಕಿನ ಚಿಕ್ಕಿನಕೋಪ್ಪ, ಬನ್ನಿಕೋಪ್ಪ, ತಳಕಲ್, ಮುಡಲಗೇರಿ ಹಾಗೂ ಕುಕನೂರಿನಲ್ಲಿ ಮತ್ತು ಯಲಬುರ್ಗಾ ತಾಲೂಕಿನ ಯಲಬುರ್ಗಾ, ಮುಧೋಳ ಹಾಗೂ ತೊಂಡಿಹಾಳದಲ್ಲಿ ಕಡಲೇಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.ನೋಡಲ್ ಅಧಿಕಾರಿಗಳ ವಿವರ: ಕಡಲೇಕಾಳು ಖರೀದಿ ಕೇಂದ್ರಗಳಾದ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ ಖರೀದಿ ಕೇಂದ್ರಗಳಿಗೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ.ಬಸವರಾಜ ಮೊ.ಸಂ: 9448765143, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದೆ. ನವಲಿ ಹಾಗೂ ಕನಕಗಿರಿ ಖರೀದಿ ಕೇಂದ್ರಕ್ಕೆ ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಹರೀಶ ಪತ್ತಾರ ಮೊ.ಸಂ: 9060893320. ಕುಷ್ಟಗಿ ಹನುಮಸಾಗರ, ತಾವರಗೇರಾ (ಮೆಣೇದಾಳ) ಖರೀದಿ ಕೇಂದ್ರಕ್ಕೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸುರೇಶ ಬಿ ತಂಗನೂರು ಮೋ.ಸಂ: 9880886909. ಚಿಕ್ಕಿನಕೋಪ್ಪ, ಬನ್ನಿಕೋಪ್ಪ, ತಳಕಲ್, ಮುಡಲಗೇರಿ, ಕುಕನೂರು, ಹಾಗೂ ಯಲಬುರ್ಗಾ, ಮುಧೋಳ ಮತ್ತು ತೊಂಡಿಹಾಳದಲ್ಲಿ (ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ್ ಗುಡಿ ಮೊ.ಸಂ: 9972054874, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. 

ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಕಡಲೇಕಾಳು ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್‌.ಎ.ಕ್ಯೂ ಗುಣಮಟ್ಟದ ಕಡಲೇಕಾಳನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕೊಪ್ಪಳ ದೂ.ಸಂ: 08539-230040, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಹಲಗೆರಿಯ ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಿ 

ಕೊಪ್ಪಳ 07: ಕೊಪ್ಪಳ ತಾಲೂಕಿನ ಹಲಗೆರಿ ಗ್ರಾಮದ ನಿವಾಸಿ 48 ವರ್ಷದ ರಾಮಣ್ಣ ತಂದೆ ದೇವಪ್ಪ ಗುನ್ನಳ್ಳಿ ಎಂಬ ವ್ಯಕ್ತಿ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸುವಂತೆ ಕೊಪ್ಪಳ ಗ್ರಾಮೀಣ ಪೊಲೀಸ ಠಾಣೆಯ ಠಾಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದದಾರೆ. 

ವ್ಯಕ್ತಿಯು 2024ರ ಜನವರಿ 17 ರಂದು ಬೆಳಿಗ್ಗೆ 5:00 ಗಂಟೆ ಸುಮಾರಿಗೆ ಯಾವದೊ ಕಾರಣಕ್ಕೆ ಮನೆಯಿಂದ ಹೋಗಿ ಮನೆಗೆ ಹಿಂತಿರುಗಿ ವಾಪಸ ಬಾರದೆ ಕಾಣೆಯಾಗಿದ್ದಾನೆ ಎಂದು ವ್ಯಕ್ತಿಯ ಹೆಂಡತಿ ದೂರು ನೀಡಿದ್ದು, ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಗುನ್ನೆ ನಂ: 18/2024 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 

ಕಾಣೆಯಾದ ವ್ಯಕ್ತಿ ದುಂಡು ಮುಖ, ಗೊದಿ ಮೈಬಣ್ಣ, ಕಪ್ಪು ಕುದಲು, ಕುರಚಲು ಗಡ್ಡ, ಸದೃಡ ಮೈಕಟ್ಟು ಹಾಗೂ ಎತ್ತರ 5.5 ಫೂಟ್ ಎತ್ತರವಾಗಿದ್ದು. ಮನೆಯಿಂದ ಹೋಗುವಾಗ ಬಿಳಿಯ ದೋತುರಾ ಮತ್ತು ಬಿಳಿಯ ಲುಂಗಿ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾನೆ. ಈ ವ್ಯಕ್ತಿಯು ಯಾರಿಗಾದರೂ ಕಂಡಲ್ಲಿ ಅಥವಾ ಮಾಹಿತಿ ದೊರೆತಲ್ಲಿ ಕೊಪ್ಪಳ ಕಂಟ್ರೋಲ್ ರೂಂ.ನಂ: 08539-100 ಮತ್ತು 230222, ಕೊಪ್ಪಳ ಗ್ರಾಮಿಣ ಪೊಲೀಸ ಠಾಣೆ ಪಿ.ಎಸ್‌.ಐ ಮೊ.ಸಂ: 08539-221333,9480803746 ಮತ್ತು ಸಿ.ಪಿ.ಐ ದೂರವಾಣಿ ನಂ: 9480803731 ಹಾಗೂ ಕೊಪ್ಪಳ ಡಿ.ವೈ.ಎಸ್‌.ಪಿ ಪೋ.ನಂ: 08539-230342,9480803720 ಮತ್ತು ಕೊಪ್ಪಳ ಪೊಲೀಸ್ ಠಾಣೆಯ ಎಸ್‌.ಪಿ ಮೊ.ಸಂ: 08539-230111ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.