ಆರ್ ಬಿ ಐಗೆ ಸುಪ್ರೀಂಕೋರ್ಟ್ ಎಚ್ಚರಿಕೆ
ನವದೆಹಲಿ, ಏಪ್ರಿಲ್ 26 ಮಾಹಿತಿ ಹಕ್ಕು ಕಾಯ್ದೆಯಡಿ ಬ್ಯಾಂಕುಗಳ ತಪಾಸಣಾ ವರದಿಗಳನ್ನು ಬಹಿರಂಗಗೊಳಿಸುವಂತೆ ತಾನು ನೀಡಿದ್ದ ಆದೇಶ ಪಾಲಿಸಲು ಭಾರತೀಯ ರಿಸವರ್್ ಬ್ಯಾಂಕ್ ಗೆ ಸುಪ್ರೀಂ ಕೋಟರ್್ ಶುಕ್ರವಾರ ಮತ್ತೊಂದು ಅವಕಾಶ ನೀಡಿದೆ. ನ್ಯಾಯಮೂತರ್ಿ ಎಲ್. ನಾಗೇಶ್ವರರಾವ್ ಅವರನ್ನೊಳಗೊಂಡ ನ್ಯಾಯಪೀಠ, ಮಾಹಿತಿ ಕಾಯ್ದೆಯಡಿ, ಬ್ಯಾಂಕುಗಳಿಗೆ ಸಂಬಂಧಿಸಿದ ಮಾಹಿತಿ ಬಹಿರಂಗಪಡಿಲು ತನ್ನ ನೀತಿಯನ್ನು ಬದಲಿಸಿಕೊಳ್ಳಲು ಕೇಂದ್ರೀಯ ಬ್ಯಾಂಕ್ ಗೆ ಸೂಚನೆ ನೀಡಿದ್ದು, ಕಾನೂನು ಪ್ರಕಾರ ಇದು ಮಾಡಲೇಬೇಕಾದ ಕರ್ತವ್ಯವಾಗಿದೆ ಎಂದು ಹೇಳಿದೆ. ಅಪೆಕ್ಸ್ ಕೋಟರ್್ ಆದೇಶಗಳ ಉಲ್ಲಂಘನೆಯ ಪ್ರವೃತ್ತಿ ಮುಂದುವರಿಸಿದರೆ, ನ್ಯಾಯಾಂಗ ನಿಂದನೆ ಪ್ರಕ್ರಿಯೆ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಆರ್ ಬಿ ಐಗೆ ಎಚ್ಚರಿಕೆ ನೀಡಿದೆ. ಮಾಹಿತಿ ಹಕ್ಕು ಕಾರ್ಯಕರ್ತರಾದ ಗಿರೀಶ್ ಹಾಗೂ ಸುಭಾಷ್ ಎಂಬವರು, ಬ್ಯಾಂಕುಗಳ ತಪಾಸಣಾ ವರದಿಯನ್ನು ಮಾಹಿತಿ ಹಕ್ಕುಗಳ ಕಾಯ್ದೆಯಡಿ ಬಹಿರಂಗಗೊಳಿಸಬೇಕು ಎಂದು ನ್ಯಾಯಾಲಯ ಆದೇಶ ಹೊರಡಿಸಿದ್ದರೂ, ಅದನ್ನು ಜಾರಿಗೊಳಿಸದೆ ನ್ಯಾಯಾಂಗ ನಿಂಧನೆ ಎಸಗಿರುವ ಕೇಂದ್ರೀಯ ಬ್ಯಾಂಕ್ ವಿರುದ್ದ ಕ್ರಮ ಜರಿಗಿಸಬೇಕು ಎಂದು ಸಲ್ಲಿಸಿದ್ದ ಆಜರ್ಿ ವಿಚಾರಣೆಯ ವೇಳೆ ನ್ಯಾಯಾಲಯ ಈ ಸೂಚನೆ ನೀಡಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 