ಹಿಂದುತ್ವ” ಪುಸ್ತಕ ಬಿಡುಗಡೆಗೊಳಿಸಲಿರುವ ಪ್ರಸಾರ ಭಾರತಿ ಅಧ್ಯಕ್ಷ ಸೂರ್ಯಪ್ರಕಾಶ್
SURYA PRAKASH
ತಿರುವನಂತಪುರಂ, ನ 27 -ಆರ್ ಎಸ್ ಎಸ್ ಮುಖಂಡ ಮತ್ತು ಪ್ರಜ್ಞಾ ಪ್ರವಾಹ ರಾಷ್ಟ್ರೀಯ ಸಂಯೋಜಕ ಜೆ ನಂದಕುಮಾರ್ ವಿರಚಿತ “ಹಿಂದುತ್ವ ಫಾರ್ ಚೇಂಜಿಂಗ್ ಟೈಮ್” ಪುಸ್ತಕವನ್ನು ಡಿಸೆಂಬರ್ 1ರಂದು ಕೊಚ್ಚಿ ಅಂತಾರಾಷ್ಟ್ರೀಯ ಪುಸ್ತಕೋತ್ಸವದಲ್ಲಿ ಪ್ರಸಾರ ಭಾರತಿ ಅಧ್ಯಕ್ಷ ಎ.ಸೂರ್ಯಪ್ರಕಾಶ್ ಬಿಡುಗಡೆಗೊಳಿಸಲಿದ್ದಾರೆ.
ಈ ಕುರಿತು ಬುಧವಾರ ಟ್ವೀಟ್ ಮಾಡಿರುವ ಸೂರ್ಯಪ್ರಕಾಶ್ , “ಪುಸ್ತಕ ಬಿಡುಗಡೆಯ ಭಾಗವಾಗುವುದಕ್ಕೆ ಸಂತಸವಾಗುತ್ತಿದೆ. ರಂಗಹರಿಜೀ, ನಂದಕುಮಾರ್ ಅವರನ್ನು ಭೇಟಿಯಾಗಲು ಉತ್ಸುಕನಾಗಿದ್ದೇನೆ. ಈ ವಿಷಯದ ಸಾಹಿತ್ಯಕ್ಕೆ “ಹಿಂದುತ್ವ” ಹೆಚ್ಚುವರಿ ಮೌಲ್ಯವಾಗಲಿದೆ’ ಎಂದಿದ್ದಾರೆ.
ತಮ್ಮ ಪುಸ್ತಕದಲ್ಲಿ ನಂದಕುಮಾರ್, ಹಿಂದುತ್ವದ ವಿವಿಧ ಸೈದ್ಧಾಂತಿಕ ವಾದಗಳ ಯಶಸ್ಸು ಮತ್ತು ವೈಫಲ್ಯಗಳನ್ನು ವಿಶ್ಲೇಷಿಸಿದ್ದಾರೆ. ಬದಲಾಗುತ್ತಿರುವ ಕಾಲದಲ್ಲಿ ಹಿಂದುತ್ವ ಹೇಗೆ ಪ್ರಸ್ತುತವಾಗುತ್ತದೆ ಎಂಬುದನ್ನು ವಿವರಿಸುವುದರ ಜೊತೆಗೆ, ಹಿಂದೂ ಸಿದ್ಧಾಂತ ಅಪ್ರಸ್ತುತವಾಗಿದೆ ಎಂದು ಆರೋಪಿಸುವ ಎಡಪಂಥೀಯರಿಗೂ ಉತ್ತರ ನೀಡಿದ್ದಾರೆ.
ಯುಎನ್ಐ ಸುದ್ದಿಸಂಸ್ಥೆಯೊಂದಿಗೆ ಪುಸ್ತಕದ ಕುರಿತು ಮಾತನಾಡಿರುವ ನಂದಕುಮಾರ್, “ಹಿಂದೂ ಸಿದ್ಧಾಂತದ ಕುರಿತು ಅಪಪ್ರಚಾರ ಮಾಡಿ ಸಾಂತ್ವನ ಹುಡುಕುವುದು ಜಾಗತಿಕವಾಗಿ, ರಾಷ್ಟ್ರೀಯವಾಗಿ ಮತ್ತು ವಿಶೇಷವಾಗಿ ಕೇರಳದಲ್ಲಿ ಅಪ್ರಸ್ತುತವಾಗಿರುವ ಎಡಪಂಥೀಯರ ಏಕೈಕ ಚಟುವಟಿಕೆಯಾಗಿದೆ” ಎಂದರು.
ಇಂಡಸ್ ಸ್ಕ್ರಾಲ್ಸ್ ಪ್ರೆಸ್ ಪ್ರಕಟಿಸಿರುವ ಪುಸ್ತಕದ ಮೊದಲ ಪ್ರತಿಯನ್ನು ಆರ್. ಹರಿ ಸ್ವೀಕರಿಸಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 