ಸ್ವಚ್ಛತಾ ಸಪ್ತಾಹ ಕಾರ್ಯಕ್ರಮಕ್ಕೆ ಟಿ. ಕೃಷ್ಣಮೂತರ್ಿ ಚಾಲನೆ
ಕೊಪ್ಪಳ 23: ಕೊಪ್ಪಳ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಮತ್ತು ಶಿಕ್ಷಣ ಇಲಾಖೆ, ತಾಲೂಕ ಪಂಚಾಯತ್ ಯೂನಿಸೆಫ್ ಸಹಯೋಗದಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾದ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮಕ್ಕೆ ತಾ.ಪಂ ಕಾರ್ಯನಿವರ್ಾಹಕ ಅಧಿಕಾರಿ ಟಿ. ಕೃಷ್ಣಮೂತರ್ಿ ಅವರು ಹಸಿರು ನಿಶಾನೆ ತೊರಿಸುವುದರ ಮೂಲಕ ಚಾಲನೆ ನೀಡಿದರು.
ಸಪ್ತಾಹಕ್ಕೆ ಚಾಲನೆ ನೀಡಿದ ತಾ.ಪಂ ಕಾರ್ಯನಿವರ್ಾಹಕ ಅಧಿಕಾರಿ ಟಿ. ಕೃಷ್ಣಮೂತರ್ಿ ಅವರು ಮಾತನಾಡಿ, "ಸ್ವಚ್ಛ ಭಾರತ ಮಿಷನ್ (ಗ್ರಾಮ) ಯೋಜನೆಯಡಿ ಬೇಸ್ಲೈನ್ ಸವರ್ೇ 2012"ರ ಪ್ರಕಾರ ಕೊಪ್ಪಳ ತಾಲೂಕು ಈಗಾಗಲೇ ಸಂಪೂರ್ಣ ಬಯಲು ಬಹಿದರ್ೆಸೆ ಮುಕ್ತವಾಗಿದ್ದು, ಈ ನಿಟ್ಟಿನಲ್ಲಿ ವೈಯಕ್ತಿಕ ಶೌಚಾಲಯಗಳ ಬಳಕೆಯ ಕುರಿತು, ಘನತ್ಯಾಜ್ಯ ವಿಲೇವಾರಿಯ ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಣೆಯ ಹಿನ್ನೆಲೆಯಲ್ಲಿ ಕಸವನ್ನು ವಣಕಸ ಹಾಗೂ ಹಸಿಕಸವನ್ನು ಪ್ರತ್ಯೇಕವಾಗಿ ಕಸ ಸಂಗ್ರಹಣ ವಾಹನಗಳಿಗೆ ಒದಗಿಸಲು ಹಾಗೂ ಅಂಗನವಾಡಿ ಮತ್ತು ಶಾಲಾ ವಿದ್ಯಾಥರ್ಿಗಳಿಗೆ ಶುಚಿತ್ವದ ಮಹತ್ವವನ್ನು ತಿಳಿಸಲು ಯೂನಿಸೆಫ್ ಸಹಯೋಗದಲ್ಲಿ "ವಾಷ್ ಕಾರ್ಯಕ್ರಮದಡಿಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳ ಆದೇಶದ ಮೇರೆಗೆ ಆಚರಿಸಲಾಗುತ್ತಿದ್ದು, ಸಪ್ತಾಹವು ಜು. 30 ರವರೆಗೆ ಜರುಗಲಿದೆ. ವೈಯಕ್ತಿಕ ಶೌಚಾಲಯಗಳ ಬಳಕೆಯ ಮಹತ್ವ, ಸ್ವಚ್ಛತೆಯ ಜಾಗೃತಿ, ಪ್ಲಾಸ್ಟೀಕ್ ಬಳಕೆ ನಿಷೇದ ಮತ್ತು ಶಾಲಾ ಮಕ್ಕಳಿಗೆ ಕೈ ತೊಳೆಯಿವುದು ಮತ್ತು ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು. ಸ್ವಚ್ಛತಾ ಜಾಗೃತಿ ಸಪ್ತಾಹ ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 