ಇಂದು ಭಾರತ ಮತ್ತು ವಿಂಡೀಸ್ ನಡುವೆ ಟಿ-20 ಅಂತಾರಾಷ್ಟ್ರೀಯ ಮೊದಲ ಪಂದ್ಯ
ಕೋಲ್ಕತ್ತಾ 03: ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟಿ-20 ಅಂತಾರಾಷ್ಟ್ರೀಯ ಮೊದಲ ಪಂದ್ಯ ಆರಂಭವಾಗಲಿದೆ.
ಕೋಲ್ಕತ್ತಾದಲ್ಲಿ ನಡೆಯಲಿರುವ ಚುಟುಕು ಕ್ರಿಕೆಟ್ನ ಮೊದಲ ಹಣಾಹಣಿ ತೀವ್ರ ಕುತೂಹಲ ಕೆರಳಿಸಿದೆ.
ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಸೋತು ಸುಣ್ಣವಾಗಿರುವ ವಿಂಡೀಸ್ ದೈತ್ಯರು ಟಿ-20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನದೊಂದಿಗೆ ಅತಿಥೇಯರಿಗೆ ತಿರುಗೇಟು ನೀಡುವ ತವಕದಲ್ಲಿದ್ದಾರೆ.
ಎರಡು ಬಾರಿ ಭಾರತಕ್ಕೆ ವಿಶ್ವಕಪ್ನ ವಿಜೇತ ತಂಡದ ನೇತೃತ್ವ ವಹಿಸಿದ್ದ ಮಹೇಂದ್ರ ಸಿಂಗ್ ಧೋನಿ ಇದೇ ಮೊದಲ ಸಲ ಟಿ-20 ಪಂದ್ಯದಿಂದ ಹೊರಗುಳಿದಿರುವುದು ಕ್ರಿಕೆಟ್ ಪ್ರೇಮಿಗಳಲ್ಲಿ ನಿರಾಸೆ ಮೂಡಿಸಿದೆ.
ಜೊತೆಗೆ ಚುಟುಕು ಕ್ರಿಕೆಟ್ ಪಂದ್ಯದಿಂದ ನಾಯಕ ವಿರಾಟ್ ಕೊಹ್ಲಿ ಸಹ ವಿಶ್ರಾಂತಿ ಪಡೆದಿದ್ದಾರೆ.
ಪ್ರವಾಸಿ ತಂಡ ಟೆಸ್ಟ್ನಲ್ಲಿ 0-2 ಪಂದ್ಯಗಳಿಂದ ಭಾರತಕ್ಕೆ ಶರಣಾಗಿತ್ತು. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ ಏಕದಿನ ಪಂದ್ಯಾವಳಿಯಲ್ಲಿ 3-1ರಿಂದ ವಿಂಡೀಸ್ ದೈತ್ಯರನ್ನು ಮಣಿಸಿದ್ದರು.
ಈ ಸೋಲುಗಳಿಂದ ಕಂಗೆಟ್ಟಿರುವ ವೆಸ್ಟ್ ಇಂಡೀಸ್ ಟಿ-20ಯ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಮಾನ ಉಳಿಸಿಕೊಳ್ಳುವ ತವಕದಲ್ಲಿದೆ. ನಾಯಕ ಜಾನ್ಸನ್ ಹೋಲ್ಡರ್ ವಿಶ್ರಾಂತಿ ಪಡೆದಿದ್ದು, ಕಾರ್ಲೋಸ್ ಬ್ರಾತ್ ವೈಟ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಒಟ್ಟಾರೆ ನಾಳೆಯ ಟಿ-20 ಹೈವೋಲ್ಟೇಜ್ ಕದನ ಕುತೂಹಲ ಕೆರಳಿಸಿದೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 